-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೃದಯಾಘಾತವಾದ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾಗಲೆ ಡಾಕ್ಟರ್ ಗೆ ಹಾರ್ಟ್ ಅಟ್ಯಾಕ್!

ಹೃದಯಾಘಾತವಾದ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾಗಲೆ ಡಾಕ್ಟರ್ ಗೆ ಹಾರ್ಟ್ ಅಟ್ಯಾಕ್!

ಕಾಮಾರೆಡ್ಡಿ (ತೆಲಂಗಾಣ) : ಹೃದಯಾಘಾತದ ರೋಗಿಯೋರ್ವರಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ವೈದ್ಯರೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದ ಕಾಮಾರೆಡ್ಡಿ ಎಂಬಲ್ಲಿ ನಡೆದಿದೆ. 

ಹೃದಯ ತಜ್ಞ ಡಾ.ಲಕ್ಷ್ಮಣ್​​ ಎಂಬುವವರು ಹೃದಯಾಘಾತದಿಂದ ಮೃತಪಟ್ಟವರು. 

ಡಾ.ಲಕ್ಷ್ಮಣ್ ಅವರು ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ ಮಂಡಲದ ನಿವಾಸಿಯಾಗಿದ್ದಾರೆ‌. ಸರ್ಜು ಎಂಬ ವ್ಯಕ್ತಿಗೆ ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಅವರ ಜೀವ ಉಳಿಸಲು ಡಾ.ಲಕ್ಷ್ಮಣ್‌ ಚಿಕಿತ್ಸೆ ನೀಡಲು ಪ್ರಯತ್ನ ಪಡುತ್ತಿದ್ದರು. 

ಈ ವೇಳೆ ವಿಚಿತ್ರ ಎಂಬಂತೆ ಡಾ.ಲಕ್ಷ್ಮಣ್ ಅವರಿಗೂ ಹೃದಯಾಘಾತವಾಗಿದೆ. ಏಕಾಏಕಿ ಕುಸಿದುಬಿದ್ದ ಅವರು ಅಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಸರ್ಜುವನ್ನು ಕಾಮಾರೆಡ್ಡಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸದರೂ, ಮಾರ್ಗಮಧ್ಯೆ ಸರ್ಜು ಮೃತಪಟ್ಟಿದ್ದಾರೆ. 

ಇದೀಗ ನಿಜಾಮಾಬಾದ್ ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದ ಡಾ.ಲಕ್ಷ್ಮಣ್‌ ಸಾವಿಗೆ ಇಡೀ ಆಸ್ಪತ್ರೆ ಕಂಬನಿ ಮಿಡಿದಿದೆ. 

Ads on article

Advertise in articles 1

advertising articles 2

Advertise under the article

ಸುರ