-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬೆದರಿಕೆ- ಹಿಂದೂ ಸಂಘಟನೆ ಮುಖಂಡನ ವಿರುದ್ದ ಪ್ರಕರಣ  ( Video)

ಮಂಗಳೂರು: ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬೆದರಿಕೆ- ಹಿಂದೂ ಸಂಘಟನೆ ಮುಖಂಡನ ವಿರುದ್ದ ಪ್ರಕರಣ ( Video)

 


ಮಂಗಳೂರು:  ಕಲ್ಲು ಗಣಿಗಾರಿಕೆ ವಿರುದ್ದ ನಡೆದ ಪ್ರತಿಭಟನೆ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬೆದರಿಕೆಯೊಡ್ಡಿದ ಹಿಂದೂ ಸಂಘಟನೆಯ ಮುಖಂಡನ ವಿರುದ್ದ ಪುಂಜಲ್ ಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಬಂಟ್ವಾಳದ ಕಾರಿಂಜದಲ್ಲಿ ಕಲ್ಲು ಗಣಿಗಾರಿಕೆ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆಯ ಮುಖಂಡ ಜಗದೀಶ್ ಕಾರಂತ್ ಅವರು  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಅವರನ್ನು ಉದ್ದೇಶಿಸಿ  ಕಾರಿಂಜೇಶ್ವರ  ದೇವಸ್ಥಾನದ ಸುತ್ತಮುತ್ತ  ನಡೆಯುವ ಗಣಿಗಾರಿಕೆಯನ್ನು  ನಿಲ್ಲಿಸಲು ಡಿಸೆಂಬರ್ 21 ರೊಳಗೆ  ನಿಲ್ಲಿಸದಿದ್ದರೆ  ಜಿಲ್ಲಾಧಿಕಾರಿಗಳ ಕಚೇರಿಗೆ  ಲಗ್ಗೆ ಹಾಕಿ ಅವನ ಕೊರಳಪಟ್ಟಿಯನ್ನು  ಹಿಡಿಯುತ್ತೇವೆ.


ತಾಕತ್ತಿದ್ದರೆ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸೋ, ಇಲ್ಲವಾದರೆ ಟ್ರಾನ್ಸ್ ಫರ್ ತೆಗೆದುಕೊಂಡು ಹೋಗು ಎಂದು  ಏಕವಚನದಲ್ಲಿ ಮತ್ತು ಅಸಭ್ಯ ರೀತಿಯಲ್ಲಿ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.






Ads on article

Advertise in articles 1

advertising articles 2

Advertise under the article

ಸುರ