-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಭಟ್ಕಳದ ಯುವತಿ ನಾಪತ್ತೆ: ಪೊಲೀಸಪ್ಪನೊಂದಿಗೆ ಪರಾರಿಯಾದ  ಶಂಕೆ

ಭಟ್ಕಳದ ಯುವತಿ ನಾಪತ್ತೆ: ಪೊಲೀಸಪ್ಪನೊಂದಿಗೆ ಪರಾರಿಯಾದ ಶಂಕೆ

ಭಟ್ಕಳ: ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೋಷಕರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಿತ್ರಾಪುರ ಹೊಸಗದ್ದೆ ನಿವಾಸಿ ಮಮತಾ ಜಗದೀಶ ನಾಯ್ಕ (23) ನಾಪತ್ತೆಯಾದ ಯುವತಿ.

ನಾಪತ್ತೆಯಾದ ಮಮತಾ ಜಗದೀಶ ನಾಯ್ಕರಿಗೆ ಕಳೆದ ಕೆಲವು ಸಮಯಗಳ ಹಿಂದೆ ಫೇಸ್‌ಬುಕ್‌ನಲ್ಲಿ ಗೋಕಾಕ ತಾಲೂಕಿನ ಪೊಲೀಸ್ ಪೇದೆ ಪ್ರಕಾಶ ಅಣ್ಣಪ್ಪ ಗಾಡಿವಡ್ಡರ್ ಎಂಬಾತನ ಪರಿಚಯವಾಗಿದೆ. ಕಳೆದ ಅ.25ರಂದು ಆತ ಭಟ್ಕಳಕ್ಕೆ ಬಂದು ಈಕೆಯ ವಿಚಾರವಾಗಿ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹೋಗಿದ್ದ ಎನ್ನಲಾಗಿದೆ. ಬಳಿಕ ಆಕೆಯ ತಂಟೆಗೆ ಬರುವುದಿಲ್ಲ ಎಂದು ಆಕೆಯ ಪೋಷಕರಿಗೆ ಭರವಸೆ ಕೊಟ್ಟು ಹೋಗಿದ್ದ. 

ಆದರೆ ನ.11ಕ್ಕೆ ಬೆಳಗ್ಗೆ ಬಂದು ಆಕೆಯೊಂದಿಗೆ ಮಾತನಾಡಿಕೊಂಡು ಹೋಗಿದ್ದಾನೆ. ಅದಾಗಿ ಕೇವಲ ಅರ್ಧ ಗಂಟೆಯೊಳಗೆ ಮಮತಾ ಜಗದೀಶ್ ನಾಯ್ಕ್ ಮನೆಯಿಂದ ನಾಪತ್ತೆಯಾಗಿದ್ದಾರೆಂದು ಅವರ  ಸಹೋದರ ರಮೇಶ ನಾರಾಯಣ ನಾಯ್ಕ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ‌ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ