-->

ಬಂಟ್ವಾಳದ ಶ್ರೀ ಕಾರಿಂಜೇಶ್ವರ ದೇವಾಲಯದೊಳಗೆ ಶೂಧರಿಸಿ ಪ್ರವೇಶಿಸಿ ಪ್ರಾವಿತ್ರ್ಯಕ್ಕೆ ಧಕ್ಕೆ ತಂದಿರುವ ಯುವಕರ ತಂಡ: ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳದ ಶ್ರೀ ಕಾರಿಂಜೇಶ್ವರ ದೇವಾಲಯದೊಳಗೆ ಶೂಧರಿಸಿ ಪ್ರವೇಶಿಸಿ ಪ್ರಾವಿತ್ರ್ಯಕ್ಕೆ ಧಕ್ಕೆ ತಂದಿರುವ ಯುವಕರ ತಂಡ: ಕಠಿಣ ಕ್ರಮಕ್ಕೆ ಆಗ್ರಹ


ಬಂಟ್ವಾಳ: ಇಲ್ಲಿನ ಪುರಾಣ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಾಲಯದೊಳಗೆ ಐವರು ಯುವಕರ ತಂಡ ಶೂ ಧರಿಸಿ ಪ್ರವೇಶಿಸಿ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಪೋಟೋ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಕಾರಿನಲ್ಲಿ ಮೋಜಿ ಮಸ್ತಿ ಮಾಡಲು ಬಂದಿದ್ದ ಐವರು ಯುವಕರ ಶ್ರೀ ಕಾರಿಂಜೇಶ್ವರ ದೇವಾಲಯದ ಒಳಗಡೆಯೇ ಶೂ ಧರಿಸಿ ಪ್ರವೇಶ ಮಾಡಿದ್ದರು. ಇದರ ಫೋಟೊ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬಂಟ್ವಾಳ ತಾಲೂಕು ಹಿಂದು ಜಾಗರಣ ವೇದಿಕೆ ಘಟನೆಯನ್ನು ಖಂಡಿಸಿದ್ದು, ಕಾನೂನು ಸಮರಕ್ಕೆ ಸಿದ್ಧವಾಗುವುದಾಗಿ ಸೂಚನೆ ನೀಡಿದೆ.

ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್  ನಾಯ್ಕ್ ಉಳಿಪ್ಪಾಡಿ ಗುತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಘಟನೆಯ ಬಗ್ಗೆ ತನಿಖೆಗೊಳಪಡಿಸಬೇಕು. ಸಮಾಜದಲ್ಲಿ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುವಂತವರ ವಿರುದ್ಧ ಕಠಿಣ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 

Ads on article

Advertise in articles 1

advertising articles 2

Advertise under the article