-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದೀಪಾವಳಿ ಪೂಜಾ ಸಾಮಾಗ್ರಿ ವಿಸರ್ಜಿಸಲು ಹೋದ ಸಹೋದರಿಯರೀರ್ವರು ಕೆರೆ ಪಾಲು

ದೀಪಾವಳಿ ಪೂಜಾ ಸಾಮಾಗ್ರಿ ವಿಸರ್ಜಿಸಲು ಹೋದ ಸಹೋದರಿಯರೀರ್ವರು ಕೆರೆ ಪಾಲು

ಬೆಳಗಾವಿ: ಕೆರೆ, ಹೊಳೆಗಳ ಬದಿಗಳಿಗೆ ಹೋಗಿ ಮಕ್ಕಳು ನೀರು ಪಾಲಾಗುತ್ತಿರುವ ಸುದ್ದಿ ಅಲ್ಲಲ್ಲಿ ನಡೆಯುತ್ತಲೇ ಇರುತ್ತದೆ‌. ಇಂತಹದ್ದೇ ಒಂದು ದುರಂತ ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸವೆಂದರೆ ಇಲ್ಲಿ ಒಡಹುಟ್ಟಿದ ಸಹೋದರಿಯರೀರ್ವರು ನೀರು ಪಾಲಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ನೇತ್ರಾ ಈರಣ್ಣ(8) ಕೊಳವಿ ಹಾಗೂ ಪ್ರಿಯಾ ಈರಣ್ಣ ಕೊಳವಿ(6) ನೀರುಪಾಲಾಗಿರುವ ಸಹೋದರಿಯರು.

ಈ ಇಬ್ಬರು ಬಾಲಕಿಯರು ತಮ್ಮ ಹಿರಿಯ ಸಹೋದರಿಯೊಂದಿಗೆ ದೀಪಾವಳಿ ಹಬ್ಬದ ಪೂಜಾ ಸಾಮಾಗ್ರಿಗಳನ್ನು ವಿಸರ್ಜಿಸಲು ಇಲ್ಲಿನ ಬಾಳೆಗಿಡ ಕೆರೆಗೆ ಹೋಗಿದ್ದರು.  ಈ ಸಂದರ್ಭ ಈ ದುರಂತ ಸಂಭವಿಸಿದೆ. 

ಹಿರಿಯ ಸಹೋದರಿ ನೋಡು ನೋಡುತ್ತಿದ್ದಂತೆ ತಂಗಿಯರು ಕೆರೆಗೆ ಬಿದ್ದಿದ್ದಾರೆ. ಆಕೆ ತಕ್ಷಣ ಬೊಬ್ಬೆಯಿಟ್ಟಿದ್ದಾಳೆ. ಸ್ಥಳೀಯರು ರಕ್ಷಣೆಗೆ ಧಾವಿಸಿದ್ದರೂ ಅವರ ಜೀವ ಉಳಿಸಲು ಸಾಧ್ಯವಾಗಿಲ್ಲ. ಸ್ಥಳೀಯ ಈಜುಗಾರರು ಮೃತದೇಹವನ್ನು ಮೇಲಕ್ಕೆತ್ತಿದ್ದು, ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article