-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪರೀಕ್ಷೆ ಭೀತಿ: ಪಿಎಚ್​ಡಿ ವಿದ್ಯಾರ್ಥಿನಿ ನೇಣಿಗೆ ಶರಣು

ಪರೀಕ್ಷೆ ಭೀತಿ: ಪಿಎಚ್​ಡಿ ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು: ಪಿಎಚ್​ಡಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಕತ್ತು ಒಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಸ್ವತಿಪುರಂನಲ್ಲಿ ನಡೆದಿದೆ.

ಚಾಮರಾಜನಗರ ಮೂಲದ ರಶ್ಮಿ (29) ಮೃತ ಪಿಎಚ್ ಡಿ ವಿದ್ಯಾರ್ಥಿನಿ.  

ಎಂಎಸ್ಸಿ ಕೆಮಿಸ್ಟ್ರಿ ಮುಗಿಸಿರುವ ರಶ್ಮಿ ಮೈಸೂರು ವಿವಿಯಲ್ಲಿ ಪಿಎಚ್​ಡಿ ಮಾಡುತ್ತಿದ್ದರು.‌ ಅವರು ಸರಸ್ವತಿಪುರಂ 9ನೇ ಮೈನ್​ನಲ್ಲಿರುವ ಪಿಜಿಯಲ್ಲಿ ಉಳಿದುಕೊಂಡಿದ್ದರು‌. ಅಲ್ಲದೆ ಜೆಎಸ್​ಎಸ್​ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು

ರಸಾಯನ ಶಾಸ್ತ್ರದಲ್ಲಿ ಪಿಎಚ್​ಡಿ ಮಾಡುತ್ತಿದ್ದ ಇವರು ಸಂಶೋಧನೆಗೆ ಬೇಕಾದ ದಾಖಲಾತಿಗಳನ್ನು ಸಂಗ್ರಹ ಮಾಡಿ ಪ್ರಬಂಧ ಮಂಡಿಸುವ ವಿಚಾರದಲ್ಲಿ ಸಿದ್ಧತೆ ಮಾಡಿಕೊಂಡಿರಲಿಲ್ಲ ಎನ್ನಲಾಗಿದೆ. ಪರಿಣಾಮ ಒತ್ತಡಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ