-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನಲ್ಲಿ ಒಂಟಿಯಾಗಿ ಹೋಗುವ  ಬೈಕ್ ನಲ್ಲಿ ಸವಾರರ ಸುಲಿಗೆ- ಮಂಗಳಮುಖಿ ಅರೆಸ್ಟ್

ಮಂಗಳೂರಿನಲ್ಲಿ ಒಂಟಿಯಾಗಿ ಹೋಗುವ ಬೈಕ್ ನಲ್ಲಿ ಸವಾರರ ಸುಲಿಗೆ- ಮಂಗಳಮುಖಿ ಅರೆಸ್ಟ್


ಮಂಗಳೂರು; ಒಂಟಿಯಾಗಿ ಹೋಗುವ ಬೈಕ್ ಸವಾರರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


ಬೆಂಗಳೂರು ನಗರದ ಇಜಿಪುರದ  ಅಭಿಷೇಕ್ @ ಗೊಂಬೆ @ ಅನಾಮಿಕ ( 27) ಬಂಧಿತ ಮಂಗಳಮುಖಿ.


ಮಂಗಳೂರು ನಗರದ ನಂತೂರು ಪದವು ಬಳಿಯಿರುವ ಬಿ ಎಸ್ ಎನ್ ಎಲ್ ಎಕ್ಸ್‌ಚೇಂಜ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ  ಗಣೇಶ್ ಶೆಟ್ಟಿ ರವರು ಬೈಕ್ ನಲ್ಲಿ ಬರುವಾಗ ಈ  ಮಂಗಳ ಮುಖಿ ರಸ್ತೆಗೆ ಅಡ್ಡ ಬಂದು ಗಣೇಶ್ ಶೆಟ್ಟಿರವರನ್ನು ತಡೆದು ನಿಲ್ಲಿಸಿ , ಅವರ ಮುಖಕ್ಕೆ ಪೆಪ್ಪರ್ ಸ್ಪೇ ಮಾಡಿ ಅವರ ಕುತ್ತಿಯಲ್ಲಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿದ್ದನು. ಈ ಪ್ರಕರಣದಲ್ಲಿ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದಾಗ ಈತ ಮೂರು‌ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿದುಬಂದಿದೆ.

 ಆರೋಪಿ ಯಿಂದ ಒಟ್ಟು 71 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ