-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಗನ ಆಸೆ ನೆರವೇರಿಸಲು ವಾಹನವೊಂದನ್ನು ಆವಿಷ್ಕರಿಸಿದ ತಂದೆಗೆ ವಿಶಿಷ್ಟ ಆಫರ್ ನೀಡಿದ ಆನಂದ್ ಮಹೀಂದ್ರಾ

ಮಗನ ಆಸೆ ನೆರವೇರಿಸಲು ವಾಹನವೊಂದನ್ನು ಆವಿಷ್ಕರಿಸಿದ ತಂದೆಗೆ ವಿಶಿಷ್ಟ ಆಫರ್ ನೀಡಿದ ಆನಂದ್ ಮಹೀಂದ್ರಾ

ಮುಂಬೈ: ಸೋಶಿಯಲ್ ಮೀಡಿಯಾಗಳಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ, ಮಹೀಂದ್ರಾ ಗ್ರೂಪ್​ ಆಫ್​ ಚೇರ್ಮನ್​ ಆನಂದ್​ ಮಹೀಂದ್ರಾ ಆಗಾಗ ತಮಗೆ ಕಂಡ ವಿಶೇಷತೆಗಳನ್ನು ಆಗಾಗ ಪರಿಚಯಿಸುತ್ತಿರುತ್ತಾರೆ. ಅದರಂತೆ ಈ ಬಾರಿ ಒಂದು ವಿಶೇಷ ವಾಹನವನ್ನು ಪರಿಚಯಿಸುತ್ತಾ ಅವರು ವಾಹನ ತಯಾರಿಸಿದವನಿಗೆ ಭಾರೀ ಆಫರ್​ ನೀಡುವ ಮೂಲಕ ಭಾರಿ ಸುದ್ದಿಯಾಗಿದ್ದಾರೆ.

ಮಹಾರಾಷ್ಟ್ರದ ದತ್ತಾತ್ರೇಯ ಲೋಹರ್​ ಎಂಬುವರು ಹಾಳಾಗಿರುವ ಲೋಹಗಳ ಚೂರು ಹಾಗೂ ಗುಜರಿ ವಸ್ತುಗಳನ್ನು ಬಳಸಿಕೊಂಡು ನಾಲ್ಕು ಚಕ್ರದ ವಾಹನವನ್ನು ಸಂಶೋಧಿಸಿದ್ದರು. ಹಿಸ್ಟರಿಕೆನೋ ಎಂಬ ಹೆಸರಿನ ಯೂಟ್ಯೂಬ್​ ಚಾನೆಲ್​ ನಲ್ಲಿ ಈ ಬಗ್ಗೆ ವೀಡಿಯೋ ಅಪ್ಲೋಡ್ ಆಗಿತ್ತು. ದತ್ತಾತ್ರೆಯ ಲೋಹಾರ್​ ಅಲ್ಪಸ್ವಯ ಶಿಕ್ಷಣ ಪಡೆದಿದ್ದರೂ ತಮ್ಮ ಮಗನಿಗೋಸ್ಕರ ವಾಹನ ಸಂಶೋಧನೆ ಮಾಡಿದ್ದಾರೆ. ಈ ವಿಶಿಷ್ಟ ಸಂಶೋಧನೆಯನ್ನು ನೋಡಿ ಪ್ರಭಾವಿತರಾಗಿರುವ ಆನಂದ್​ ಮಹೀಂದ್ರಾ ತಕ್ಷಣ ವೀಡಿಯೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಮೆಂಟ್ಸ್ ಮಾಡಿರುವ, 'ಇದು ಸ್ಪಷ್ಟವಾಗಿ ಯಾವುದೇ ರೀತಿಯಲ್ಲಿ ವಾಹನವಾಗಿ ದೊಡ್ಡಮಟ್ಟದ ಪ್ರಯೋಜನವಾಗೋದಿಲ್ಲ. ಆದರೂ, ನಮ್ಮ ಜನರ ಜಾಣ್ಮೆ ಮತ್ತು ಸಾಮರ್ಥ್ಯಗಳನ್ನು ಮೆಚ್ಚುವುದನ್ನು ನಾನು ಎಂದಿಗೂ ನಿಲ್ಲಿಸುವುದಿಲ್ಲ" ಎಂದು ಬರೆದುಕೊಂಡಿದ್ದಾರೆ. 

45 ಸೆಕೆಂಡ್ ನ ವೀಡಿಯೋದಲ್ಲಿ ಮಹಾರಾಷ್ಟ್ರದ ದೇವರಾಷ್ಟ್ರೇ ಗ್ರಾಮದ ಕಮ್ಮಾರ ಆಗಿರುವ ದತ್ತಾತ್ರೆಯ ಲೋಹರ್​ ಯಾವ ರೀತಿ ವಾಹನ ಕೆಲಸ ಮಾಡುತ್ತದೆ ಎಂಬುದನ್ನು ವಿವರಿಸಿದ್ದಾರೆ. ಕೇವಲ 60 ಸಾವಿರ ರೂ‌.ನಲ್ಲಿ ವಾಹನವನ್ನು ತಯಾರಿಸಲಾಗಿದೆ. ಕೇವಲ ದ್ವಿಚಕ್ರ ವಾಹನಗಳಲ್ಲಿ ಇರುವಂತಹ ಕಿಕ್​ ಸ್ಟಾರ್ಟ್​ ಮೆಕ್ಯಾನಿಸಂ ವ್ಯವಸ್ಥೆಯು ಕೂಡ ಈ ವಾಹನದಲ್ಲಿದೆ. ಇದು ಹಳೆಯ ಮತ್ತು ಕೈಬಿಟ್ಟಂತಹ ಕಾರಿನ ಭಾಗಗಳನ್ನು ಬಳಸಿ ನಿರ್ಮಿಸಲಾಗಿದೆ. 

ಈ ಬಗ್ಗೆ ಮತ್ತೊಂದು ಟ್ವೀಟ್​ ಮಾಡಿರುವ ಆನಂದ್​ ಮಹೀಂದ್ರಾ "ಆತನ ಆವಿಷ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸುವ ಬದಲು ವಾಹನವು ಸರ್ಕಾರದ ಕೆಲವು ನಿಯಮಗಳನ್ನು ಅನುಸರಿಸಿಲ್ಲ ಎಂದು ಕಾರಣ ನೀಡಿ ಸ್ಥಳೀಯ ಅಧಿಕಾರಿಗಳು ಅದನ್ನು ರಸ್ತೆಗಳಲ್ಲಿ ಓಡಿಸದಂತೆ ತಡೆದಿದ್ದಾರೆ. ಆದರೆ ವೈಯುಕ್ತಿಕವಾಗಿ ದತ್ತಾತ್ರೆಯ ಅವರಿಗೆ ಬೊಲೆರೋ ಕಾರು ವಿನಿಮಯದ ಆಫರ್​ ನೀಡಿದ್ದಾರೆ. ಅಲ್ಲದೆ, ಆತನ ಆವಿಷ್ಕಾರ ಇತರರಿಗೆ ಮಾದರಿಯಾಗಲು ಮಹೀಂದ್ರ ರೀಸರ್ಚ್​ ವ್ಯಾಲಿಯಲ್ಲಿ ಅದನ್ನು ಪ್ರದರ್ಶಿಸಲಾಗುವುದು" ಎಂದು ಭರವಸೆ ನೀಡಿದ್ದಾರೆ. ಸದ್ಯ ದತ್ತಾತ್ರೆಯ ಆವಿಷ್ಕಾರದ ವೀಡಿಯೋ ವೈರಲ್​ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article