-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಹಿಳೆಯನ್ನು ಬಿಗಿದಪ್ಪಿ ಅಸಭ್ಯ ವರ್ತನೆ: ಆರೋಪಿಗೆ ಚಪ್ಪಲಿ ಹಾರ ಹಾಕಿ, ಧರ್ಮದೇಟು ನೀಡಿ ಮೆರವಣಿಗೆ

ಮಹಿಳೆಯನ್ನು ಬಿಗಿದಪ್ಪಿ ಅಸಭ್ಯ ವರ್ತನೆ: ಆರೋಪಿಗೆ ಚಪ್ಪಲಿ ಹಾರ ಹಾಕಿ, ಧರ್ಮದೇಟು ನೀಡಿ ಮೆರವಣಿಗೆ

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದ ಮೇಲೆ ವ್ಯಕ್ತಿಯೋರ್ವರನಿಗೆ ಸಾರ್ವಜನಿಕರು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಕುಷ್ಟಗಿ ತಾಲೂಕು ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. 

ಪ್ರಕಾಶ ಪೂಜಾರ ಎಂಬಾತನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಚಪ್ಪಲಿ ಹಾರ ಹಾಕಿ  ಮೆರವಣಿಗೆ ಮಾಡಿರುವ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ.

ಕುಷ್ಟಗಿ ತಾಲೂಕಿನ ಬೊಮ್ಮನಾಳ‌ ಗ್ರಾಮದ ಜಮೀನಿನಲ್ಲಿದ್ದ ಪ್ರಕಾಶ ಪೂಜಾರಗೆ ವಿವಾಹಿತ ಮಹಿಳೆಯೋರ್ವರು ಗೊಬ್ಬರದ ಬುಟ್ಟಿ ಎತ್ತಿ ತಲೆಗೆ ಇಡುವಂತೆ ಕೋರಿದ್ದಾರೆ‌. ಸಹಾಯಕ್ಕೆ ಬಂದ ಪ್ರಕಾಶ ಪೂಜಾರ ಮಹಿಳೆಯನ್ನು ಬಿಗಿದಪ್ಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಕ್ಷಣ ಮಹಿಳೆ ಚೀರಾಡಿಕೊಂಡಿದ್ದು, ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಆಗ ಆತ ಅಲ್ಲಿಂದ ಪರಾರಿಯಾಗಿದ್ದ.

ಗ್ರಾಮಸ್ಥರು ಈ ಕುರಿತು ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಮಾಡಲು ಯತ್ನಿಸಿದ್ದರು. ಈ ವೇಳೆ ಮಹಿಳೆಯ ಕಡೆಯವರು ಆಗಿರುವ ಅವಮಾನ ಸಹಿಸಲಾಗದೆ ಆರೋಪಿಗೆ ಚಪ್ಪಲಿ, ಬೇವಿನ ಹಾರ ಹಾಕಿ, ಧರ್ಮದೇಟು ನೀಡಿ ಮರೆವಣಿಗೆ ಮಾಡಿದ್ದಾರೆ. ಇದೇ ವೇಳೆ ಮನನೊಂದ ಮಹಿಳೆ, ಪ್ರಕಾಶ ಪೂಜಾರಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾಳೆ.

ಸುಮಾರು ಎಂಟು ಜನ ಸೇರಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಇದರ ಮಧ್ಯೆ ದಲಿತ ವ್ಯಕ್ತಿಯ ಮೇಲೆ ಸವರ್ಣಿಯರಿಂದ ದೌರ್ಜನ್ಯ ಎಂಬ ಮರು ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಹನುಮಸಾಗರ ಪೊಲೀಸ್ ಠಾಣಾಯಲ್ಲಿ ದೂರು - ಪ್ರತಿದೂರು ದಾಖಲಾಗಿದ್ದು, 55 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article