-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೆಲಸಕ್ಕೆ ಸೇರಿದ ಎಂಟೇ ದಿನಗಳಲ್ಲಿ ದುರಂತ ಅಂತ್ಯಗೊಂಡ ಯುವತಿ: ಆಕೆಗೂ ತನಗೂ ಬೆಂಕಿ ಹಚ್ಚಿ ಕುಕೃತ್ಯ ಮೆರೆದ ದಿನಗೂಲಿ ನೌಕರ

ಕೆಲಸಕ್ಕೆ ಸೇರಿದ ಎಂಟೇ ದಿನಗಳಲ್ಲಿ ದುರಂತ ಅಂತ್ಯಗೊಂಡ ಯುವತಿ: ಆಕೆಗೂ ತನಗೂ ಬೆಂಕಿ ಹಚ್ಚಿ ಕುಕೃತ್ಯ ಮೆರೆದ ದಿನಗೂಲಿ ನೌಕರ

ಕೋಯಿಕ್ಕೋಡ್​: ದಿನಗೂಲಿ ನೌಕರನೋರ್ವನು ಪಂಚಾಯತ್ ಕಚೇರಿ ಮಹಿಳಾ ಸಿಬ್ಬಂದಿಗೆ ಬೆಂಕಿ ಹಚ್ಚಿ ಕೊಲೆಗೈದು, ತಾನೂ ಬೆಂಕಿ ಹಚ್ಚಿಕೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ. 

ಸಿಂಧೂರಿ ಅಲಿಯಾಸ್​ ಕೃಷ್ಣಪ್ರಿಯಾ (22) ಕೊಲೆಯಾದ ದುರ್ದೈವಿ. ಥಿಕ್ಕೋಡಿ ನಿವಾಸಿ ನಂದನ್​ಕುಮಾರ್​ (26) ಎಂಬಾತ ಕೃಷ್ಣಪ್ರಿಯಾಗೆ ಬೆಂಕಿಯಿಟ್ಟು ತಾನೂ ಬೆಂಕಿ ಹಚ್ಚಿಕೊಂಡು ಮೃತಪಟ್ಟ ಯುವಕ.

ಬೆಂಕಿ‌ಹಚ್ಚಿಕೊಂಡು ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ನಂದನ್ ಕುಮಾರ್ ನನ್ನು ಕೋಯಿಕ್ಕೋಡ್​ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಆತ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾನೆ. ಕೃಷ್ಣಪ್ರಿಯಾ ಕೂಡ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. 

ಸ್ನಾತಕೋತ್ತರ ಪದವಿ ವ್ಯಾಸಂಗವನ್ನು​ ಮುಗಿಸಿದ್ದ ಕೃಷ್ಣಪ್ರಿಯಾ, ಪಂಚಾಯತ್​ ಕಚೇರಿಯಲ್ಲಿ ಯೋಜನಾ ಸಹಾಯಕಿ ಹುದ್ದೆಗೆ ಕೇವಲ 8 ದಿನಗಳ ಹಿಂದಷ್ಟೇ ಸೇರಿದ್ದರು. ನಂದನ್​ಕುಮಾರ್​ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಪಂಚಾಯತ್​ ಕಚೇರಿಯ ಮುಂದೆಯೇ ಕೃಷ್ಣಪ್ರಿಯಾಗೆ ನಂದನ್​ ಬೆಂಕಿ ಹಚ್ಚಿದ್ದಾನೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. 

ತಕ್ಷಣ ಪಂಚಾಯತ್​ ಕಚೇರಿಯ ಸಿಬ್ಬಂದಿ ಗೋವಿಂದನ್ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಿ, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಕೃಷ್ಣಪ್ರಿಯಾ ನಾನು ಇಟ್ಟಿರುವ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ನಂದನ್​ ಈ ಕೃತ್ಯ ಎಸಗಿದ್ದಾನೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಘಟನೆಗೆ ನಿಖರ ಕಾರಣ ಏನೆಂದು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article