-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮತ್ತೆ ಮುನ್ನೆಲೆಗೆ ಬಂದ ಹೇಮಾಮಾಲಿನಿ ಕೆನ್ನೆ: ನಾನು ನನ್ನ ಕೆನ್ನೆಯನ್ನು ಸುರಕ್ಷಿತವಾಗಿರಿಕೊಳ್ಳುವುದು ಒಳಿತು ಎಂದ ನಟಿ

ಮತ್ತೆ ಮುನ್ನೆಲೆಗೆ ಬಂದ ಹೇಮಾಮಾಲಿನಿ ಕೆನ್ನೆ: ನಾನು ನನ್ನ ಕೆನ್ನೆಯನ್ನು ಸುರಕ್ಷಿತವಾಗಿರಿಕೊಳ್ಳುವುದು ಒಳಿತು ಎಂದ ನಟಿ

ಮುಂಬೈ: ರಾಜಕಾರಣಿಗಳು ಮಾತಿನ ಭರದಲ್ಲಿ ಏನೋನೋ ಹೇಳಿಕೆಗಳನ್ನು ಕೊಡುವುದು ಮಾಮೂಲಿ. ಆ ಬಳಿಕ ವಿರೋಧಗಳು ಬಂದಾಗ ಕ್ಷಮೆ ಯಾಚನೆ ಮಾಡಿ ಕೈತೊಳೆದುಕೊಂಡು ಬಿಡುತ್ತಾರೆ‌. ಇತ್ತೀಚಿಗೆ ರಾಜ್ಯದ ಮಾಜಿ ಸ್ಪೀಕರ್‌ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದರು. ಅದೇ ರೀತಿ ಇದೀಗ ಮಹಾರಾಷ್ಟ್ರ ಸಚಿವ ಗುಲಾಬ್ ರಾವ್ ಪಾಟೀಲ್ ಹೆದ್ದಾರಿಯನ್ನು ನಟಿ, ಸಂಸದೆ ಹೇಮಾಮಾಲಿನಿ ಕೆನ್ನೆಗೆ ಹೋಲಿಕೆ ಮಾಡಿ ಭಾರಿ ಟೀಕೆಗೆ ಒಳಗಾಗಿದ್ದಾರೆ.

2019ರಲ್ಲಿ ಬಿಹಾರದ ಸಿಎಂ ಆಗಿದ್ದ ಲಾಲೂ ಪ್ರಸಾದ್‌ ಯಾದವ್‌ ಅವರು ಕೂಡ ಅಲ್ಲಿನ ರಸ್ತೆಗಳನ್ನು ಹೇಮಾಮಾಲಿನಿ (73) ಕೆನ್ನೆಗೆ ಹೋಲಿಸಿ ಟೀಕೆಗೆ ಗುರಿಯಾಗಿದ್ದರು. ಇದೀಗ ಮತ್ತೆ ನಟಿ ಹೇಮಾಮಾಲಿನಿ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರದ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್ ಭಾಷಣವೊಂದರಲ್ಲಿ ಮಾತನಾಡುತ್ತಾ "30 ವರ್ಷಗಳಿಂದ ಶಾಸಕನಾಗಿರುವ ನನ್ನ ಕ್ಷೇತ್ರಕ್ಕೆ ಬಂದು ಒಮ್ಮೆ ರಸ್ತೆಗಳನ್ನು ನೋಡಿ. ಅದು ನಟಿ ಹೇಮಾಮಾಲಿನಿ ಕೆನ್ನೆಯಂತೆ ಇಲ್ಲದಿದ್ದಲ್ಲಿ, ನಾನು ರಾಜೀನಾಮೆ ನೀಡುತ್ತೇನೆ" ಎಂದಿದ್ದಾರೆ.

ರಸ್ತೆಗಳನ್ನು ತಮ್ಮ ಕೆನ್ನೆಗೆ ಹೋಲಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ನಟಿ ಹೇಮಾ ಮಾಲಿನಿ, ''ಯಾವುದೇ ಮಹಿಳೆಯ ಕುರಿತು ಹಗುರವಾಗಿ ಮಾತನಾಡುವುದು ಸರಿಯಲ್ಲ. ಈ ಮಾತನ್ನು ಜನಸಾಮಾನ್ಯರು ಹೇಳಿದ್ದರೆ ನಿರ್ಲಕ್ಷಿಸಬಹುದಿತ್ತು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೋರ್ವನು ಹೇಳಿರುವುದು ಖಂಡನೀಯ. ಈ ಮಾತು ಅವರಿಗೆ ಕ್ಷೋಭೆ ತರುವುದಿಲ್ಲ. ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಹೇಳಿಕೆ ನೀಡಬಾರದು" ಎಂದಿದ್ದಾರೆ. 

ಅಲ್ಲದೆ ಈ ಹೇಳಿಕೆ ನೀಡುವ ಮುನ್ನ ಹೇಮಾಮಾಲಿನಿ ತಿಳಿಹಾಸ್ಯವನ್ನು ಮೂಡಿಸುತ್ತಾ "ನಾನು ನನ್ನ ಕೆನ್ನೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ" ಎಂದು ಹೇಳಿದ್ದಾರೆ.

ಸಚಿವ ಗುಲಾಬ್ ರಾವ್ ಹೇಳಿಕೆಗೆ  ಭಾರಿ ಆಕ್ರೋಶ, ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಅವರು, "ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ" ಎಂದು ಕ್ಷಮೆಯಾಚನೆ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ