-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು ಅನ್ಯಕೋಮಿನ ಜೋಡಿಯ ಮೇಲೆ ಅನೈತಿಕ ಪೊಲೀಸ್ ಗಿರಿ: ಬಂಧನಕ್ಕೊಳಗಾದ ನಾಲ್ವರಿವರು

ಮಂಗಳೂರು ಅನ್ಯಕೋಮಿನ ಜೋಡಿಯ ಮೇಲೆ ಅನೈತಿಕ ಪೊಲೀಸ್ ಗಿರಿ: ಬಂಧನಕ್ಕೊಳಗಾದ ನಾಲ್ವರಿವರು

ಮಂಗಳೂರು: ನಗರದಲ್ಲಿ ನಡೆದಿರುವ ಅನ್ಯಕೋಮಿನ ಜೋಡಿಯ ಮೇಲೆ ಬಸ್ ನಿಂದ ಇಳಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ರಂಜಿತ್, ರಾಘವೇಂದ್ರ, ಪ್ರಕಾಶ್, ಪವನ್ ಬಂಧಿತರು.

ಈ ಘಟನೆ ನಿನ್ನೆ 10.30 ಸುಮಾರಿಗೆ ನಡೆದಿತ್ತು. ಮಂಗಳೂರು ಸರ್ವೀಸ್ ಬಸ್ ನಿಲ್ದಾಣದಿಂದ ಮಂಗಳೂರು - ಕೊಲ್ಲೂರಿಗೆ ಹೋಗುವ  ಸರ್ವೀಸ್ ಬಸ್ ನಲ್ಲಿ ಅನ್ಯಕೋಮಿನ ವಿದ್ಯಾರ್ಥಿ ಜೋಡಿಯೊಂದು ಅಸಭ್ಯವಾಗಿ ವರ್ತಿಸುತ್ತಿದೆ ಎಂದು ಪ್ರಯಾಣಿಕರು ಬಸ್ ನಿರ್ವಾಹಕನಲ್ಲಿ ದೂರು ನೀಡಿದ್ದರು‌‌. ಈ ಸಂದರ್ಭ 5-6 ಮಂದಿಯ ತಂಡವು ವಿದ್ಯಾರ್ಥಿ - ವಿದ್ಯಾರ್ಥಿನಿಯನ್ನು ಬಸ್ ನಿಂದ ಇಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ‌. ಅಲ್ಲದೆ ಮತ್ತೆ ಆ ವಿದ್ಯಾರ್ಥಿನಿಯೊಂದಿಗೆ ತಿರುಗಾಡಬಾರದೆಂದು ವಿದ್ಯಾರ್ಥಿಗೆ ಆರೋಪಿಗಳು ಧಮ್ಕಿ ಹಾಕಿದ್ದರು.


ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article

ಸುರ