-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತಾಯಿಯೊಂದಿಗೆ ಮಗಳ ಮೇಲೂ ಕಣ್ಣು ಹಾಕಿದಾತ ದುರಂತವಾಗಿ ಅಂತ್ಯಗೊಂಡ: ಪ್ರೇಯಸಿ ಸೇರಿ ಮೂವರು ಅರೆಸ್ಟ್

ತಾಯಿಯೊಂದಿಗೆ ಮಗಳ ಮೇಲೂ ಕಣ್ಣು ಹಾಕಿದಾತ ದುರಂತವಾಗಿ ಅಂತ್ಯಗೊಂಡ: ಪ್ರೇಯಸಿ ಸೇರಿ ಮೂವರು ಅರೆಸ್ಟ್

ಕಲಬುರಗಿ: ತನ್ನೊಂದಿಗೆ ಅಕ್ರಮ ಸಂಬಂಧವಿದ್ದ ಪುರುಷನನ್ನು ಮತ್ತೋರ್ವ ಪ್ರಿಯಕರನ ಸಹಕಾರದಿಂದ ಮಹಿಳೆಯೋರ್ವರು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 

ಕಮಲಾಪುರ ತಾಲೂಕಿನ ಬೆಳಕೋಟಾ ಗ್ರಾಮದ ನಿವಾಸಿ, ಲ್ಯಾಬ್ ಟೆಕ್ನಿಶಿಯನ್ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಎಂಬಾತ ಕೊಲೆಯಾದ ದುರ್ದೈವಿ. ಅನಸೂಯಾ, ಶಿವಕುಮಾರ್ ಮತ್ತು ಗೋವಿಂದ್ ಬಂಧಿತ ಕೊಲೆ ಆರೋಪಿಗಳು.

ಕೊಲೆಯಾದ ಸಿದ್ದಪ್ಪನು ಅನಸೂಯ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆ ಬಳಿಕ ಆತ ಅನಸೂಯಾ ಜೊತೆಗೆ ಆಕೆಯ ಮಗಳ ಮೇಲೂ ಕಣ್ಣು ಹಾಕಿದ್ದ. ಮಗಳ ಜೊತೆಗೂ ಸರಸ ಆಡೋದಕ್ಕೆ ಅನಸೂಯಾಗೆ ಕಿರಿಕಿರಿ ಮಾಡುತ್ತಿದ್ದ ಎನ್ನಲಾಗಿದೆ. 

ಆದ್ದರಿಂದ ಆಕೆ ಸಿದ್ದಪ್ಪನ ಕಾಟ ತಾಳಲಾರದೆ ಆತನನ್ನು ಕೊಲೆ ಮಾಡಲು ಪ್ಲ್ಯಾನ್ ಮಾಡಿದ್ದಾಳೆ. ಆದ್ದರಿಂದ ಆಕೆ ತನ್ನ ಮತ್ತೋರ್ವ ಪ್ರಿಯಕರ ಶಿವಕುಮಾರ್ ನೊಂದಿಗೆ ಸೇರಿ ರಾಡ್​​ನಿಂದ ಹೊಡೆದು ಕೊಲೆ ಮಾಡಿದ್ದಾಳೆ. 

ಶಿವಕುಮಾರ್ ಕೊಲೆ ಮಾಡಲೆಂದು 50 ಸಾವಿರ ರೂ. ಕೊಡುತ್ತೇನೆಂದು ಹೇಳಿ ಮತ್ತೋರ್ವ ಆರೋಪಿ ಗೋವಿಂದ್ ಎಂಬುವನನ್ನು ಕರೆದುಕೊಂಡು ಬಂದಿದ್ದ ಎನ್ನಲಾಗಿದೆ. ಅಪರಾಧದಲ್ಲಿ ಭಾಗಿಯಾಗಿರು ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ