-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಐದರ ಬಾಲೆಯ ಅತ್ಯಾಚಾರ, ಕೊಲೆ: ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಐದರ ಬಾಲೆಯ ಅತ್ಯಾಚಾರ, ಕೊಲೆ: ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಗಾಂಧಿನಗರ (ಗುಜರಾತ್‌): ಐದು ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದಿರುವ 27 ವರ್ಷದ ಯುವಕನಿಗೆ ಗುಜರಾತ್‌ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಯುವಕ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ.

ಮಧ್ಯಪ್ರದೇಶ ರಾಜ್ಯದ ಅಪರಾಧಿ ಸುಜಿತ್‌ ಸಾಕೇತ್ ತನಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶ ಪಿ.ಎಸ್‌.ಕಾಳ ಮೇಲೆ ಚಪ್ಪಲಿ ಎಸೆದಾತ. ಆದರೆ ಅದೃಷ್ಟವಶಾತ್‌ ಆತ ಎಸೆದಿರುವ ಚಪ್ಪಲಿಯು ಗುರಿತಪ್ಪಿ ಕಟಕಟೆ ಬಾಕ್ಸ್‌ನಲ್ಲಿ ಬಿದ್ದಿದೆ. 

ಅಪರಾಧಿ ಸುಜೀತ್ ಸಾಕೇತ್ ಕಳೆದ ಏಪ್ರಿಲ‌್ 30 ರಂದು ಐದು ವರ್ಷದ ವಲಸೆ ಕಾರ್ಮಿಕರ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ. ಈತ ಬಾಲಕಿಯ ಪಾಲಕರು ಕೆಲಸಕ್ಕೆಂದು ಹೋಗಿದ್ದಾಗ ಚಾಕೊಲೇಟ್‌ ಆಮಿಷವನ್ನೊಡ್ಡಿ ಬಾಲಕಿಯನ್ನು ಅಪಹರಿಸಿದ್ದ. ಬಳಿಕ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್‌ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

Ads on article

Advertise in articles 1

advertising articles 2

Advertise under the article

ಸುರ