-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನೇಣಿಗೆ ಕೊರಳೊಡ್ಡಿದ ಎಂಬಿಬಿಎಸ್ ವಿದ್ಯಾರ್ಥಿನಿ‌ !

ಮಂಗಳೂರು: ನೇಣಿಗೆ ಕೊರಳೊಡ್ಡಿದ ಎಂಬಿಬಿಎಸ್ ವಿದ್ಯಾರ್ಥಿನಿ‌ !

ಮಂಗಳೂರು: ನಗರದ ದೇರಳಕಟ್ಟೆಯ ಕಾಲೇಜೊಂದರ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣಿಗೆ ಕೊರಳೊಡ್ಡಿ ಮೃತಪಟ್ಟ ಘಟನೆ ಇಂದು ನಡೆದಿದೆ.

ನಗರದ ಕಣಚೂರು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಇಂಟರ್ನ್ ಶಿಪ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್(25) ಮೃತಪಟ್ಟ ದುರ್ದೈವಿ.

ವೈಶಾಲಿ ಬೀದರ್ ಜಿಲ್ಲೆಯ ಆನಂದನಗರ ನಿವಾಸಿಯಾಗಿದ್ದಾರೆ. ಇಂದು ತಾನು ವಾಸವಾಗಿರುವ ನಗರದ ಕುತ್ತಾರಿನ ಮಲ್ಲೂರಿನಲ್ಲಿರುವ ಸಿಲಿಕಾನಿಯಾ ಅಪಾರ್ಟ್‌ಮೆಂಟ್ ನ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ವೈಶಾಲಿ ಗಾಯಕ್ ವಾಡ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ