-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನೇಣಿಗೆ ಶರಣಾದಳು ಯುವತಿ: ಪ್ರೇಮ ವೈಫಲ್ಯ ಕಾರಣವೇ?

ಮಂಗಳೂರು: ನೇಣಿಗೆ ಶರಣಾದಳು ಯುವತಿ: ಪ್ರೇಮ ವೈಫಲ್ಯ ಕಾರಣವೇ?

ಮಂಗಳೂರು: ಅವಳ ನಗು ನಗುತ್ತಾ ಚೆನ್ನಾಗಿಯೇ ಕೆಲಸಕ್ಕೆ ಹೋಗಿದ್ದಾಳೆ. ಆದರೆ ಅದೇನಾಯ್ತೋ ಗೊತ್ತಿಲ್ಲ ಕೆಲಸ ಬಿಟ್ಟು ಸಂಜೆ ಬಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಆಕಾಶಭವನ ಎಂಬಲ್ಲಿ ನಡೆದಿದೆ.

ಆಕಾಶಭವನದ ಕಾಪಿಗುಡ್ಡೆ ಎಂಬ ಪ್ರದೇಶದ ನಿವಾಸಿ ಶಿಫಾಲಿ(22) ಮೃತ ದುರ್ದೈವಿ.

ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಿಫಾಲಿ ಆರಾಮವಾಗಿಯೇ ಕೆಲಸಕ್ಕೆ ಹೋಗಿದ್ದಾಳೆ. ಅಲ್ಲಿಯೂ ಕೆಲಸ ಪೂರೈಸಿ ಎಂದಿನಂತೆ ಮನೆಗೆ ಮರಳಿದ್ದಾರೆ. ಆದರೆ ಅದೇನಾಯ್ತೋ ಗೊತ್ತಿಲ್ಲ, ಮನೆಗೆ ಬಂದವಳೇ ಕೋಣೆಯ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ನೋಡುವಷ್ಟರಲ್ಲಿ ಆಕೆಯ ಮೃತದೇಹವಾಗಿ ಪತ್ತೆಯಾಗಿದ್ದಾಳೆ.

ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ