-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಕ್ಕಳಾಗದ ವಿಚಾರಕ್ಕೆ ಟೆಕ್ಕಿ ಪತಿಯಿಂದ ಕಿರುಕುಳ: ಸಾಫ್ಟ್‌ವೇರ್ ಇಂಜಿನಿಯರ್ ಪತ್ನಿ ಆತ್ಮಹತ್ಯೆ

ಮಕ್ಕಳಾಗದ ವಿಚಾರಕ್ಕೆ ಟೆಕ್ಕಿ ಪತಿಯಿಂದ ಕಿರುಕುಳ: ಸಾಫ್ಟ್‌ವೇರ್ ಇಂಜಿನಿಯರ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣಾಗಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯ ಎಂಬಲ್ಲಿ ನಡೆದಿದೆ.

ಮಂಡ್ಯ ಮೂಲದ ಸಂಗೀತಾ (26) ನೇಣಿಗೆ ಶರಣಾದ ಯುವತಿ. 


ಮಂಡ್ಯ ಮೂಲದ ಸಂಗೀತಾ ಕಳೆದ‌‌  4 ವರ್ಷಗಳಿಂದ ನೆಲಮಂಗಲ ಮೂಲದ ವಿನಯ್ ಎಂಬಾತನನ್ನು ಪ್ರೀತಿಸುತ್ತಿದ್ದು, ಒಂದೂವರೆ ವರ್ಷಗಳ ಹಿಂದೆ ಇಬ್ಬರೂ ಮದುವೆಯಾಗಿದ್ದರು. ಆರಂಭದಲ್ಲಿ ಅನೋನ್ಯವಾಗಿದ್ದ ದಂಪತಿ ಮಧ್ಯೆ ಕಾಲಕ್ರಮೇಣ ಮಕ್ಕಳಾಗದ ವಿಚಾರಕ್ಕಾಗಿ ಅಸಮಾಧಾನ ಉಂಟಾಗಿತ್ತು‌‌.

ವೀರಣ್ಣನಪಾಳ್ಯದಲ್ಲಿ ವಾಸವಾಗಿದ್ದ ದಂಪತಿ ಇಬ್ಬರೂ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಸಾಫ್ಟ್​​​ವೇರ್ ಇಂಜಿನಿಯರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದರು. ಮಗುವಾಗಿಲ್ಲ ಎಂಬ ವಿಚಾರಕ್ಕಾಗಿ ಪತಿ ವಿನಯ್ ಕಿರುಕುಳ ನೀಡುತ್ತಿದ್ದ ಎಂದು ಡೆತ್ ನೋಟ್ ಬರೆದಿಟ್ಟು, ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿನಯ್ ನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ