-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಾಜಿ ನೀಲಿಚಿತ್ರ ತಾರೆ ಸನ್ನಿ ಲಿಯೋನ್​ ವಿರುದ್ಧ ಮಥುರಾ ಅರ್ಚಕರು ಗರಂ: ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದಲ್ಲಿ ಭಾರತದಲ್ಲಿ ಉಳಿಯಲು ಬಿಡುವುದಿಲ್ಲ

ಮಾಜಿ ನೀಲಿಚಿತ್ರ ತಾರೆ ಸನ್ನಿ ಲಿಯೋನ್​ ವಿರುದ್ಧ ಮಥುರಾ ಅರ್ಚಕರು ಗರಂ: ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದಲ್ಲಿ ಭಾರತದಲ್ಲಿ ಉಳಿಯಲು ಬಿಡುವುದಿಲ್ಲ

ಲಖನೌ: ಮಾಜಿ ನೀಲಿಚಿತ್ರ ತಾರೆ ಹಾಗೂ ಬಾಲಿವುಡ್ ಬ್ಯೂಟಿ ಕ್ವೀನ್ ಸನ್ನಿ ಲಿಯೋನ್​ ವಿರುದ್ಧ ಉತ್ತರ ಪ್ರದೇಶದ ಮಥುರಾ ಮೂಲದ ಅರ್ಚಕರು ಗರಂ ಆಗಿದ್ದು, ಅವರದ್ದೊಂದು ಇತ್ತೀಚಿನ ವೀಡಿಯೋ ಆಲ್ಬಮ್​ ಅನ್ನು ಬ್ಯಾನ್​ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 

'ಮಧುಬನ ಮೇ ರಾಧಿಕಾ ನಾಚೇ' ಎಂಬ ಹಾಡಿಗೆ ಸನ್ನಿ ಲಿಯೋನ್​ ಅಶ್ಲೀಲವಾಗಿ ಡ್ಯಾನ್ಸ್​ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ‌. ತಕ್ಷಣ ಈ ವೀಡಿಯೋ ಸಾಂಗ್​ ಅನ್ನು ಬ್ಯಾನ್​ ಮಾಡಬೇಕು. ಈ ವೀಡಿಯೋ ಆಲ್ಬಂ ಬ್ಯಾನ್​ ಮಾಡಿ, ಸನ್ನಿ ಲಿಯೋನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯದ ನ್ಯಾಯಾಲಯದ ಮೆಟ್ಟಿಲೇರುತ್ತೇವೆ ಎಂದು ಬೃಂದಾವನದ ಸಂತ ನಾವಲ್​ ಗಿರಿ ಮಹಾರಾಜ್​ ಎಚ್ಚರಿಕೆ ನೀಡಿದ್ದಾರೆ. 

ಅಲ್ಲದೆ ಸನ್ನಿ ಲಿಯೋನ್​ ಕೂಡಾ ಈ ದೃಶ್ಯವನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡದಿದ್ದಲ್ಲಿ ಆಕೆಯನ್ನು ಭಾರತದಲ್ಲಿ ಉಳಿಯಲು ಬಿಡುವುದಿಲ್ಲ ಎಂದಿದ್ದಾರೆ. ಅಖಿಲ ಭಾರತೀಯ ತೀರ್ಥ ಪುರೋಹಿತ್ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಮಹೇಶ್ ಪಾಠಕ್ ಕೂಡ ಸನ್ನಿ ಲಿಯೋನ್ ಡ್ಯಾನ್ಸ್ ವೀಡಿಯೋ ವಿರುದ್ಧ ಕಿಡಿಕಾರಿದ್ದಾರೆ. ಅವಹೇಳನಕಾರಿ ರೀತಿಯಲ್ಲಿ ಈ ಹಾಡನ್ನು ಪ್ರಸ್ತುತಿ ಮಾಡುವ ಮೂಲಕ ಬ್ರಿಜ್​ಭೂಮಿಯ ಪ್ರತಿಷ್ಠೆಯನ್ನು ಕೆಡಿಸಿದ್ದಾರೆ ಎಂದಿದ್ದಾರೆ. 

ಮೂಲತಃ ಈ ಹಾಡನ್ನು 1960ರಲ್ಲಿ ತೆರೆಕಂಡ 'ಕೊಹಿನೂರ್' ಸಿನಿಮಾಕ್ಕಾಗಿ ಮೊಹಮ್ಮದ್ ರಫಿಯವರು ಹಾಡಿದ್ದರು. ಸರೆಗಮ ಮ್ಯೂಸಿಕ್ ಬುಧವಾರವಷ್ಟೇ ತನ್ನ ಇತ್ತೀಚಿನ ಮಧುಬನ್ ಎಂಬ ಶೀರ್ಷಿಕೆಯಲ್ಲಿ ಈ ಸಂಗೀತ ವೀಡಿಯೊವನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಹಾಡನ್ನು ಕನಿಕಾ ಕಪೂರ್ ಮತ್ತು ಅರಿಂದಮ್ ಚಕ್ರವರ್ತಿ ಹಾಡಿದ್ದು, ಪಾರ್ಟಿ ಸಾಂಗ್​ನಲ್ಲಿ ಸನ್ನಿ ಲಿಯೋನ್ ಸೊಂಟ ಬಳುಕಿಸಿದ್ದಾರೆ. ಈ ಹಾಡು ಶ್ರೀಕೃಷ್ಣ ಹಾಗೂ ರಾಧೆಯ ನಡುವಣ ಪ್ರೇಮದ ವಿಷಯದ ಮೇಲೆ ರಚನೆಯಾಗಿರುವುದರಿಂದ ನೆಟ್ಟಿಗರು ಕೂಡ ಹಿಂದು ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ