-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಪ್ರಾಪ್ತೆಯ ಅತ್ಯಾಚಾರಗೈದ ಯುವಕನಿಗೆ 30 ವರ್ಷಗಳ ಕಠಿಣ ಸಜೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತೆಯ ಅತ್ಯಾಚಾರಗೈದ ಯುವಕನಿಗೆ 30 ವರ್ಷಗಳ ಕಠಿಣ ಸಜೆ ವಿಧಿಸಿದ ನ್ಯಾಯಾಲಯ

ಕೋಲಾರ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯುವಕನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 30 ವರ್ಷಗಳ ಕಠಿಣ ಸಜೆ ಹಾಗೂ 22 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. 

2019ರ ಅ.10ರಂದು ಕೆಜಿಎಫ್​ನ ಮಂಜುನಾಥ ನಗರದಲ್ಲಿರುವ ತನ್ನ ಮನೆಯಲ್ಲಿ ಒಬ್ಬಳೇ ಇದ್ದ ಅಪ್ರಾಪ್ತೆ ಮೇಲೆ 26 ವರ್ಷದ ಯುವಕ ಕುಟ್ಟಿ ಅಲಿಯಾಸ್​ ತಮಿಳರಸನ್ ಅತ್ಯಾಚಾರವೆಸಗಿದ್ದ. ಈ ಸಂಬಂಧ ಕೆಜಿಎಫ್​ನ ರಾರ್ಬಟ್​ಸನ್​ಪೇಟೆಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಠಾಣೆಯ ಅಂದಿನ ಇನ್​ಸ್ಪೆಕ್ಟರ್​ ಎಂ.ಸೂರ್ಯಪ್ರಕಾಶ್​ ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು  ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ಪಿ.ದೇವಮಾನೆಯವರು ಅಪರಾಧಿ ಕುಟ್ಟಿ ಅಲಿಯಾಸ್​  ತಮಿಳರಸನ್ ಗೆ 30 ವರ್ಷಗಳ ಕಠಿಣ ಸಜೆ ಹಾಗೂ 22 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ‌.  ಸರ್ಕಾರದ ಪರವಾಗಿ ಸರ್ಕಾರದ ವಿಶೇಷ ಅಭಿಯೋಜಕ ಎಸ್​. ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು. 

Ads on article

Advertise in articles 1

advertising articles 2

Advertise under the article