-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಾರದ ಹಿಂದೆಯಷ್ಟೇ ಮದುವೆಯಾದ ಎಸ್ಐ ರಸ್ತೆ ಅಪಘಾತಕ್ಕೆ ಬಲಿ!

ವಾರದ ಹಿಂದೆಯಷ್ಟೇ ಮದುವೆಯಾದ ಎಸ್ಐ ರಸ್ತೆ ಅಪಘಾತಕ್ಕೆ ಬಲಿ!

ಹೈದರಾಬಾದ್​: ವಾರದ ಹಿಂದಷ್ಟೇ ವಿವಾಹವಾದ ಸಬ್​ ಇನ್ಸ್​ಪೆಕ್ಟರ್​ ಹಾಗೂ ಅವರ ತಂದೆ ರಸ್ತೆ ಅಪಘಾತಕ್ಕೆ ಬಲಿಯಾದ ದುರಂತ ಘಟನೆಯೊಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.

ತೆಲಂಗಾಣದ ಚಿಂತಪಲ್ಲಿ ಮಂಡಲದಲ್ಲಿ ಆರ್​ಟಿಸಿ ಬಸ್​ ಹಾಗೂ ಆಟೋ ರಿಕ್ಷಾ ಮಧ್ಯೆ ಮುಖಾಮುಖಿಯಾಗಿ ಢಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಎಸ್​ಐ ನೆನವತ್​ ಶ್ರೀನು ನಾಯಕ್​ ಹಾಗೂ ಅವರ ತಂದೆ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಶ್ರೀನು ನಾಯಕ್ ವಿಕರಾಬಾದ್​ನಲ್ಲಿ ಎಸ್​ಐ ಆಗಿದ್ದರು. 

ಎಸ್​ಐ ಶ್ರೀನು ನಾಯಕ್​ ಗೆ ಒಂದು ವಾರದ ಹಿಂದೆಯಷ್ಟೇ ಮದುವೆಯಾಗಿದ್ದಾರೆ. ಇವರು ರಂಗಾರೆಡ್ಡಿ ಜಿಲ್ಲೆಯ ಮಡ್ಗುಲ ಮಂಡಲದ ಮಾನ್ಯಾ ತಾಂಡದ ನಿವಾಸಿ. ಹೈದರಾಬಾದ್​ನಿಂದ ದೇವರಕೊಂಡಕ್ಕೆ ಪ್ರಯಾಣಿಸುತ್ತಿದ್ದ ಆರ್​ಟಿಸಿ ಬಸ್​ ಎದುರಿಗೆ ಬಂದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಒಳಗೆ ಇದ್ದ ಎಸ್​ಐ ಮತ್ತು ಅವರ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರ್ಯಕ್ರಮವೊಂದಕ್ಕೆ ಹೋಗಿ ಅಲ್ಲಿಂದ ವಾಪಸ್ ಎಸ್​ಐ ತಮ್ಮ ತಂದೆಯೊಂದಿಗೆ ಆಟೋದಲ್ಲಿ ಮನೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಎಸ್​ಐ ಸಾವಿನಿಂದ ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಮೃತನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಎಸ್​ಐ ಅಕಾಲಿನ ನಿಧನಕ್ಕೆ ಸಹೋದ್ಯೋಗಿಗಳು ಕೂಡ ಕಂಬನಿ ಮಿಡಿದಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ