-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೊಸ ವರ್ಷದ ಪಾರ್ಟಿಗೆಂದು ಮೇಕೆಗಳನ್ನು ಕದ್ದು ಭರ್ಜರಿ ಬಾಡೂಟ ಮಾಡಿದ ಎಎಸ್ಐ ಅಮಾನತು!

ಹೊಸ ವರ್ಷದ ಪಾರ್ಟಿಗೆಂದು ಮೇಕೆಗಳನ್ನು ಕದ್ದು ಭರ್ಜರಿ ಬಾಡೂಟ ಮಾಡಿದ ಎಎಸ್ಐ ಅಮಾನತು!

ಬಲಂಗೀರ್: 'ಬೇಲಿಯೇ ಎದ್ದು ಹೊಲವನ್ನು ಮೇಯ್ತು' ಎಂಬಂತೆ ಇಲ್ಲೊಬ್ಬ ಪೊಲೀಸ್​ ಅಧಿಕಾರಿಯೇ ಹೊಸ ವರ್ಷದ ಪಾರ್ಟಿಗೆಂದು 2 ಮೇಕೆಗಳನ್ನು ಕದ್ದು ಭರ್ಜರಿ ಬಾಡೂಟ ಮಾಡಿ ತಿಂದು ತೇಗಿರುವ ಘಟನೆ ನಡೆದಿದೆ.

ಒಡಿಶಾದ ಬಲಂಗೀರ್ ಜಿಲ್ಲೆಯ ಸಿಂಧೆಕೆಲಾ ಪೊಲೀಸ್ ಠಾಣೆಯ ಎಎಸ್‌ಐ ಸುಮನ್ ಮಲ್ಲಿಕ್ ಮೇಕೆ ಕದ್ದ ಆರೋಪಿ ಎಂದು ಹೇಳಲಾಗುತ್ತಿದೆ.

ಹೊಸ ವರ್ಷಕ್ಕೂ ಮುನ್ನಾ ದಿನ ಸಿಂಧೆಕೆಲಾ ಗ್ರಾಮದಲ್ಲಿ 2 ಮೇಕೆಗಳು ಕಳವಾಗಿದ್ದವು. ಮೇಕೆಗಳನ್ನು ಹುಡುಕಿಕೊಂಡ ಹೊರಟ ಮಾಲಕನಿಗೆ ಎಎಸ್​ಐ ಸುಮನ್ ಮಲ್ಲಿಕ್ ಬಳಿ ಮೇಕೆಗಳಿರುವುದು ತಿಳಿದು ಬಂದಿದೆ. ಅವುಗಳನ್ನು ವಾಪಸ್​ ಕೊಡುವಂತೆ ಆತ  ಕಣ್ಣೀರಿಟ್ಟು ಮನವಿ ಮಾಡಿದ್ದಾನೆ. ಆದರೆ ಇದಕ್ಕೆ ಕ್ಯಾರೆ ಎನ್ನದೆ ಎಎಸ್​ಐ, ಕದ್ದ ಮೇಕೆಗಳನ್ನು ಕೊಂದು ನ್ಯೂ ಇಯರ್​ ಪಾರ್ಟಿಗೆ ಬಾಡೂಟ ಮಾಡಿಸಿದ್ದಾನದ. ಇದೀಗ ಎಎಸ್​ಐ ವಿರುದ್ಧ ಮೇಕೆ ಮಾಲಕ ಗುರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಆಗ ಪೊಲೀಸ್ ಸಿಬ್ಬಂದಿ ಮೇಕೆಯ ಮಾಲಕನನ್ನು ಪೊಲೀಸ್​ ವಾಹನದಲ್ಲಿ‌ ಬೇರೆಡೆಗೆ ಕರೆದೊಯ್ದಿದ್ದಾರೆ. ಇದರಿಂದ ಕಂಗಾಲಾದ ಕುಟುಂಬಸ್ಥರು ಗ್ರಾಮಸ್ಥರೊಂದಿಗೆ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿ ಧರಣಿ ನಡೆಸಿದ್ದಾರೆ. ಮೇಕೆ ಮಾಲಕನನ್ನು ಬಿಡುವಂತೆ ಹಾಗೂ 2 ಮೇಕೆಗಳ ಹಣ ಕೊಡುವಂತೆ ಆಗ್ರಹಿಸಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಬಲಂಗೀರ್ ಎಸ್ಪಿ ನಿತಿನ್ ಕುಸಲ್ಕರ್​, ಹೊಸ ವರ್ಷದ ದಿನವೇ ಎಎಸ್‌ಐ ಸುಮನ್ ಮಲ್ಲಿಕ್ ನನ್ನು ಕೆಲಸದಿಂದ ಅಮಾನತು ಮಾಡಿ ಆದೇಶಿಸಿದ್ದಾರೆ. ತನ್ನ ಸಿಬ್ಬಂದಿ ಮೂಲಕ ಎಎಸ್​ಐ ಮೇಕೆಗಳನ್ನು ಕಳವು ಮಾಡಿಸಿದ್ದನೆಂದು ಪ್ರಾಥಮಿಕ ವರದಿಯಲ್ಲಿ ಗೊತ್ತಾಗಿದೆ. 

Ads on article

Advertise in articles 1

advertising articles 2

Advertise under the article

ಸುರ