-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುಳ್ಯ: ಪುತ್ರನ ಎದೆಗೇ ಚೂರಿಯಿಂದ ಇರಿದ ತಂದೆ; ಗಾಯಾಳು ಆಸ್ಪತ್ರೆಗೆ ದಾಖಲು

ಸುಳ್ಯ: ಪುತ್ರನ ಎದೆಗೇ ಚೂರಿಯಿಂದ ಇರಿದ ತಂದೆ; ಗಾಯಾಳು ಆಸ್ಪತ್ರೆಗೆ ದಾಖಲು

ಸುಳ್ಯ(ದಕ್ಷಿಣ ಕನ್ನಡ) : ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ತಂದೆ ಹಾಗೂ ಪುತ್ರನ ನಡುವೆ ವಾಗ್ವಾದ ನಡೆದು ಮಗನ ಎದೆಗೇ ತಂದೆಯೇ ಚೂರಿಯಿಂದ ಇರಿದ ಘಟನೆಯೊಂದು ನಡೆದಿದೆ.

ಜಯಪ್ರಕಾಶ್‌ ಎಂಬಾತ ಹಲ್ಲೆಗೊಳಗಾದ ಯುವಕ. ಇದೀಗ ಈತನನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

ಗುಂಡ್ಯ ನಿವಾಸಿ ಐತಪ್ಪ ನಾಯ್ಕ್ ಹಾಗೂ ಆತನ ಪುತ್ರ ಜಯಪ್ರಕಾಶ್ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟವೇ ನಡೆದಿದೆ. ಈ ಸಂದರ್ಭ ಜಯಪ್ರಕಾಶ್‌ನ ಎದೆಗೆ ತಂದೆ ಐತ್ತಪ್ಪ ನಾಯ್ಕ್‌ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ವಿಪರೀತವಾಗಿ ರಕ್ತಸ್ರಾವಕ್ಕೊಳಗಾಗಿದ್ದಾರೆ.

ತಕ್ಷಣ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದರು‌. ಆದರೆ ರಕ್ತಸ್ರಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ. ಸದ್ಯ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದರು ಎನ್ನಲಾಗಿದೆ.

Ads on article

Advertise in articles 1

advertising articles 2

Advertise under the article