-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಡುಪಿ: ಅಯ್ಯಪ್ಪ ವೃತಾಧಾರಿ ಶಬರಿಮಲೆಯಲ್ಲಿ ಹೃದಯಾಘಾತದಿಂದ ಸಾವು

ಉಡುಪಿ: ಅಯ್ಯಪ್ಪ ವೃತಾಧಾರಿ ಶಬರಿಮಲೆಯಲ್ಲಿ ಹೃದಯಾಘಾತದಿಂದ ಸಾವು

ಉಡುಪಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಹಠಾತ್ ಮೃತಪಡುವವರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದೆ‌. ಇಂದು ಇಂತಹದ್ದೇ ಮತ್ತೊಂದು ಪ್ರಕರಣವೊಂದು ನಡೆದಿದೆ. ಅಯ್ಯಪ್ಪ ವೃತಾಧಾರಿಯಾಗಿ ಶಬರಿಮಲೆಗೆ ಯಾತ್ರೆ ಹೋಗಿದ್ದ ವ್ಯಕ್ತಿಯೊಬ್ಬರು ಶಬರಿಮಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. 

ಉಡುಪಿ ಜಿಲ್ಲೆಯ ಉದ್ಯಾವರದ ಸುರೇಶ್ ಬಂಗೇರ (52) ಎಂಬವರು ಮೃತಪಟ್ಟ ಅಯ್ಯಪ್ಪ ವೃತಾಧಾರಿ. 

ಸುರೇಶ್ ಬಂಗೇರ ಅಯ್ಯಪ್ಪ ವೃತಧಾರಿಯಾಗಿ ವ್ರತದಲ್ಲಿದ್ದರು‌. ಉದ್ಯಾವರ ಅಯ್ಯಪ್ಪಸ್ವಾಮಿ ಮಂದಿರದಿಂದ ಶಬರಿ ಮಲೆಗೆ ಯಾತ್ರೆಯನ್ನು ಕೈಗೊಂಡಿದ್ದರು. ಇವರೊಂದಿಗೆ ಒಟ್ಟು 32 ಮಂದಿ ಶಬರಿಮಲೆಗೆ ತೆರಳಿದ್ದರು. 

ಮಹಾಪೂಜೆಯಾಗಿ ಇರುಮುಡಿ ಕಟ್ಟಿ ರೈಲು ಮುಖಾಂತರ ಹೊರಟಿದ್ದ, ಇವರು ಶಬರಿಮಲೆಯಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಸುರೇಶ್ ಬಂಗೇರ ಉದ್ಯಾವರ ಸಂಪಿಗೆ ನಗರ ನಿವಾಸಿಯಾಗಿದ್ದು, ರಿಕ್ಷಾ ಚಾಲಕರಾಗಿದ್ದರು. ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article