-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸ್ನಾನಕ್ಕೆಂದು ಹೋದ ತಾಯಿ - ಮಗಳು ಉಸಿರುಕಟ್ಟಿ ಮೃತ್ಯು: ಬಚ್ಚಲು ಮನೆಯಲ್ಲಿ ಕಾದಿತ್ತು ದುರಂತ!

ಸ್ನಾನಕ್ಕೆಂದು ಹೋದ ತಾಯಿ - ಮಗಳು ಉಸಿರುಕಟ್ಟಿ ಮೃತ್ಯು: ಬಚ್ಚಲು ಮನೆಯಲ್ಲಿ ಕಾದಿತ್ತು ದುರಂತ!

ಬೆಂಗಳೂರು: ಸ್ನಾನಗೃಹಕ್ಕೆ ಸ್ನಾನ ಮಾಡಲೆಂದು ಹೋಗಿದ್ದ ತಾಯಿ-ಮಗಳು ಉಸಿರುಗಟ್ಟಿ ಮೃತಪಟ್ಟ ಹೃದಯವಿದ್ರಾವಕ ಘಟನೆಯೊಂದು ರಾಜಧಾನಿ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದ ಈ ದುರಂತದಲ್ಲಿ ತಾಯಿ ಮಂಗಳ (35) ಹಾಗೂ ಪುತ್ರಿ ಗೌತಮಿ (07) ಮೃತಪಟ್ಟಿದ್ದಾರೆ. 

ರಾಮನಗರ ಮೂಲದ ಇವರು ಕುಟುಂಬ ಸಮೇತರಾಗಿ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಇಂದು ಬೆಳಗ್ಗೆ ಮಂಗಳ ಅವರ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ತೆರಳಿದ್ದರು. ಆ ಬಳಿಕ ಅವರು ಮಗಳನ್ನು ಕರೆದುಕೊಂಡು ಸ್ನಾನಕ್ಕೆಂದು ಬಚ್ಚಲಕೋಣೆಗೆ ಹೋಗಿದ್ದಾರೆ. ಅಲ್ಲಿ ಬಿಸಿನೀರಿಗಾಗಿ ಗ್ಯಾಸ್ ಗೀಸರ್ ಅನ್ನು ಆನ್ ಮಾಡಲಾಗಿತ್ತು. 

ಅಷ್ಟರಲ್ಲಾಗಲೇ ಗ್ಯಾಸ್ ಗೀಸರ್​ನಿಂದ ಅನಿಲ ಸೋರಿಕೆಯುಂಟಾಗಿದೆ. ಪರಿಣಾಮ ಉಸಿರುಗಟ್ಟಿ ತಾಯಿ-ಮಗಳು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮನೆಯ ಮಾಲಕರ ಮನೆಯಾಕೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ