-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಶೇಷ ಚೇತನೆ ಬಾಲಕಿಯ ಮೇಲೆ ಅತ್ಯಾಚಾರ: ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಇರಿದು ವಿಕೃತಿ ಮೆರೆದ ದುಷ್ಕರ್ಮಿಗಳು

ವಿಶೇಷ ಚೇತನೆ ಬಾಲಕಿಯ ಮೇಲೆ ಅತ್ಯಾಚಾರ: ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಇರಿದು ವಿಕೃತಿ ಮೆರೆದ ದುಷ್ಕರ್ಮಿಗಳು

ಜೈಪುರ: ರಾಜಸ್ತಾನದ ಅಲ್ವಾರ್​ ಜಿಲ್ಲೆಯಲ್ಲಿ 16 ವರ್ಷದ ವಿಶೇಷ ಚೇತನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಇರಿದು, ಸೇತುವೆಯಿಂದ ಕೆಳಗೆ ಎಸೆದಿರುವ ಅಮಾನವೀಯ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆ ಬಾಲಕಿಯು ವಿಶೇಷ ಚೇತನಳಾಗಿದ್ದಾಳೆ. ಈ ವಾರದ ಆರಂಭದಲ್ಲಿ ಅಲ್ವಾರ್‌ನ ತಿಜಾರಾ ಮೇಲ್ಸೇತುವೆಯಡಿಯಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಳು. ಮಂಗಳವಾರ ಆಕೆಯನ್ನು ಅಲ್ವಾರ್​ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ವೈದ್ಯರ ಭಾರೀ ಪ್ರಯತ್ನಗಳ ಮಧ್ಯೆಯೂ ಆಕೆ ಚೇತರಿಸಿಕೊಳ್ಳದಿದ್ದಾಗ ಹೆಚ್ಚಿನ ಚಿಕಿತ್ಸೆಗೆಂದು ಆಕೆಯನ್ನು ಬುಧವಾರ ಜೈಪುರದ ಜೆಕೆ ಲಾನ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸುಮಾರು ಎರಡುವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ, ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಅಲ್ಲದೆ, ಆಕೆಯ ಗುಪ್ತಾಂಗದಲ್ಲಿ ಇರಿಯಲಾಗಿದ್ದ ಹರಿತವಾದ ಆಯುಧವನ್ನು ವೈದ್ಯರು ಹೊರತೆಗೆದಿದ್ದಾರೆ. ಆಯುಧದಿಂದ ಆಕೆಯ ಆಂತರಿಕ ಅಂಗಗಳಿಗೆ ಗಂಭೀರವಾದ ಗಾಯಗಳಾಗಿವೆ‌ ಎಂದು ವೈದ್ಯರು ತಿಳಿಸಿದ್ದಾರೆ.

 ಸದ್ಯದ ಮಾಹಿತಿಯ ಪ್ರಕಾರ, ಬಾಲಕಿಯ ಗುಪ್ತ ಅಂಗಗಳು ಭಾರೀ ಹಾನಿಗೊಳಗಾಗಿದ್ದು, ಪ್ರಸ್ತುತ ಆಕೆಯನ್ನು ಜೆಕೆ ಲೋನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ