-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮದುವೆಯಾಗುವುದಾಗಿ ವಂಚಿಸಿದ ಕಾನ್ ಸ್ಟೇಬಲ್: ತಿ.ನರಸೀಪುರ ಠಾಣೆಯ ಮುಂಭಾಗವೇ ಧರಣಿ ಕುಳಿತ ಸಂತ್ರಸ್ತ ಯುವತಿ

ಮದುವೆಯಾಗುವುದಾಗಿ ವಂಚಿಸಿದ ಕಾನ್ ಸ್ಟೇಬಲ್: ತಿ.ನರಸೀಪುರ ಠಾಣೆಯ ಮುಂಭಾಗವೇ ಧರಣಿ ಕುಳಿತ ಸಂತ್ರಸ್ತ ಯುವತಿ

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಪೊಲೀಸ್​ ಕಾನ್ ಸ್ಟೇಬಲ್ ವಂಚನೆ ಮಾಡಿರುವುದಾಗಿ ಆರೋಪಿಸಿ ಯುವತಿಯಳರ್ವಳು ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗವೇ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಳೆ. 

ತಿ.ನರಸೀಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ ಸ್ಟೇಬಲ್ ರವಿ ವಿರುದ್ಧ ಆರೋಪ ಕೇಳಿಬಂದಿದೆ. ಅನ್ಯಾಯಕ್ಕೆ ಒಳಗಾಗಿರುವ ಯುವತಿ ಬೆಂಗಳೂರಿನ ನಿವಾಸಿಯಾಗಿದ್ದು, ಇದೀಗ ನ್ಯಾಯಕ್ಕೆ ಆಗ್ರಹಿಸಿ ಆಕೆ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾಳೆ. 

2018ರಲ್ಲಿ ಈಕೆಗೆ ಪೊಲೀಸ್ ಕಾನ್ ಸ್ಟೇಬಲ್ ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದಾನೆ. ಇಬ್ಬರ ನಡುವೆ ಸ್ನೇಹ ಆರಂಭವಾಗಿದೆ. ಬಳಿಕ ಸ್ನೇಹವು ಪ್ರೇಮಕ್ಕೆ ತಿರುಗಿದೆ. ಆ ನಂತರ ಆತ ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ತನ್ನನ್ನು ಬಳಸಿಕೊಂಡಿದ್ದಾನೆಂದು ಸಂತ್ರಸ್ತ ಯುವತಿ ಗಂಭೀರ ಆರೋಪ ಮಾಡಿದ್ದಾಳೆ. ಇದೀಗ ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಳೆ. ವಂಚನೆ ಸಂಬಂಧ ಯುವತಿ ಈಗಾಗಲೇ ದೂರು ಸಹ ನೀಡಿದ್ದಾಳೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article