-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಸೋಮೇಶ್ವರ ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಮುದ್ರಪಾಲು

ಮಂಗಳೂರು: ಸೋಮೇಶ್ವರ ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಮುದ್ರಪಾಲು

ಉಳ್ಳಾಲ: ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ಸಿಲುಕಿರುವ ಪ್ರಿಯಕರನು ತನ್ನಿಬ್ಬರು ಪ್ರೇಯಸಿಯರನ್ನು ನಗರದ ಸೋಮೇಶ್ವರ ಬೀಚ್ ನಲ್ಲಿ ಮಾತುಕತೆಗೆಂದು ಬರಹೇಳಿದ್ದು, ಈ ಸಂದರ್ಭ ಏಕಾಏಕಿ ಸಮುದ್ರಕ್ಕೆ ಹಾರಿದ ಪ್ರೇಯಸಿಯೋರ್ವಳನ್ನು ಬದುಕಿಸಲು ಹೋಗಿ ಪ್ರಿಯಕರನೇ ದಾರುಣ ಅಂತ್ಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.  

ನಗರದ ಹೊರವಲಯದ ಮುನ್ನೂರು ಗ್ರಾಮ, ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ (28) ಮೃತ ಪ್ರಿಯಕರ. 

ಕಳೆದ 8 ವರ್ಷಗಳಿಂದ ಲಾಯ್ಡ್ ಡಿಸೋಜ, ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೊ(22) ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಈ ನಡುವೆ ಲಾಯ್ಡ್  ಡಿಸೋಜನಿಗೆ ತೊಕ್ಕೊಟ್ಟು ಚೆಂಬುಗುಡ್ಡೆಯ ಇನ್ನೊಬ್ಬ ಕ್ರೈಸ್ತ ಯುವತಿಯೊಂದಿಗೆ ಪ್ರೇಮಾಂಕುರವಾಗಿದೆ. ಈ ವಿಚಾರ ತಿಳಿದು ಮೊದಲ ಪ್ರೇಯಸಿ ಅಶ್ವಿತಾ ಫೆರಾವೊ ತಗಾದೆ ತೆಗೆದಿದ್ದಾಳೆ.

ಈ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿ ಬಗೆಹರಿಸಲೆಂದು ನಿನ್ನೆ ಸಂಜೆ ಲಾಯ್ಡ್ ಡಿಸೋಜ ತನ್ನಿಬ್ಬರು ಪ್ರೇಯಸಿಯರನ್ನು ಸೋಮೇಶ್ವರ ಕಡಲ ಕಿನಾರೆಗೆ ಕರೆಸಿದ್ದಾನೆ. ಈ ವೇಳೆ, ಲಾಯ್ಡ್ ಡಿಸೋಜ ಮಾತಿನಿಂದ ಬೇಸರಗೊಂಡ ಅಶ್ವಿತಾ ಫೆರಾವೊ ಏಕಾಏಕಿ‌ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದಾಳೆ. ಪ್ರೇಯಸಿಯನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಹಾರಿದ್ದಾನೆ. 

ಈ ವೇಳೆ, ಕಾವಲು ಪಡೆಯ ಸಿಬ್ಬಂದಿ ನೋಡಿ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪರಿಣಾಮ ಅಶ್ವಿತಾರನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ.‌ ಆದರೆ ಪ್ರಿಯತಮೆಯನ್ನು ರಕ್ಷಿಸಲು ಹೋಗಿದ್ದ ಲಾಯ್ಡ್ ಸಮುದ್ರಪಾಲಾಗಿ ಅಸುನೀಗಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ್ದ ಅಶ್ವಿತಾರನ್ನು ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ