-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತಿ ಹೊರಹೋದಾಗಲೇ ತಾಯಿ - ಮಗಳಿಂದ ನಡೆಯಿತು ಘೋರ ಕೃತ್ಯ: ಕಾರಣ ನಿಗೂಢ

ಪತಿ ಹೊರಹೋದಾಗಲೇ ತಾಯಿ - ಮಗಳಿಂದ ನಡೆಯಿತು ಘೋರ ಕೃತ್ಯ: ಕಾರಣ ನಿಗೂಢ

ಹೊಸೂರು: ತಾಯಿ - ಮಗಳು ನೇಣಿಗೆ ಶರಣಾಗಿ ಮೃತಪಟ್ಟ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡು ರಾಜ್ಯದ ಹೊಸೂರಿನ ಅಣ್ಣಾನಗರದಲ್ಲಿ ನಡೆದಿದೆ.

ಅಣ್ಣಾನಗರದ ಜೈಶಂಕರ್ ಕಾಲನಿ ನಿವಾಸಿಗಳಾದ ನೂರ್ ಜಹಾನ್ (38) ಹಾಗೂ ಪುತ್ರಿ ಮೊಸಿಂಜಾನ್ (17) ನೇಣಿಗೆ ಶರಣಾದವರು.  

ನೂರ್ ಜಹಾನ್​ ಪತಿ ಮೆಹಬೂಬ್ ಪಾಷ ಬಾರಂಡಪಲ್ಲಿಯಲ್ಲಿ ಇಲೆಕ್ಟ್ರಿಕ್ ಶಾಪ್ ನಡೆಸುತ್ತಿದ್ದಾರೆ. ರಾತ್ರಿ ಮೆಹಬೂಬ್ ಪಾಷಾ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭ ಅವರ ಪತ್ನಿ ನೂರ್ ಜಹಾನ್ ಹಾಗೂ ಪುತ್ರಿ ಮೊಸಿಂಜಾನ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ರಿ ಮೊಸಿಂಜಾನ್ 10ನೇ ತರಗತಿವರೆಗೆ ಓದಿದ್ದು, ಕಂಪ್ಯೂಟರ್ ಕ್ಲಾಸ್ ಗೆ ಹೋಗುತ್ತಿದ್ದಳು. ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹೊಸೂರು ಪೊಲೀಸರು, ಮನೆಯ ಬಾಗಿಲು ಒಡೆದು ಒಳ ನುಗ್ಗಿ ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ತನಿಖೆ ಆರಂಭವಾಗಿದ್ದು, ಇನ್ನಷ್ಟೇ ಕಾರಣ ತಿಳಿದುಬರಬೇಕಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ