-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ವೀಡಿಯೋ ಹರಿಯಬಿಟ್ಚ ಯುವಕ

ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ವೀಡಿಯೋ ಹರಿಯಬಿಟ್ಚ ಯುವಕ

ಸುಳ್ಯ: ಸುಳ್ಳು ಪ್ರಕರಣಕ್ಕೆ ಸಂಬಂಧಿಸಿ, ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿ ಪೊಲೀಸ್ ಠಾಣೆಗೆ ಕರೆಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆಂದು ಯುವಕನೊಬ್ಬ ಆರೋಪಿಸಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ  ಭಾರೀ ವೈರಲ್​ ಆಗುತ್ತಿದೆ.




ಸುಳ್ಯ ತಾಲೂಕಿನ ಪಾಲ್ತಾಡಿ ಸಮೀಪದ ಮಣಿಕ್ಕರ ಕೊಡ್ಯಕ್ಕ ನಿವಾಸಿ ಅಜಿತ್ ಎಸ್. ಈ ರೀತಿಯಲ್ಲಿ ಆರೋಪಿಸಿ ವೀಡಿಯೋ ಮಾಡಿರುವ ಯುವಕ. ಪೊಲೀಸರು ತನ್ನನ್ನು ಠಾಣೆಗೆ ಕರೆಸಿಕೊಂಡು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. 

ಟಿವಿ ರಿಪೇರಿ ವೃತ್ತಿ ನಿರ್ವಹಿಸುತ್ತಿರುವ ಅಜಿತ್ ಎಸ್., ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ಬಾಲು ಹಾಗೂ ಇನ್ನೋರ್ವ ಪೊಲೀಸ್ ಸಿಬ್ಬಂದಿ ತನ್ನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. ಠಾಣೆಯಲ್ಲಿ ಆ ದಿನದ ಸಿಸಿ ಕ್ಯಾಮರಾ ಪರಿಶೀಲಿಸಿದರೆ ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿಯಬಹುದು ಎಂದು ಅಜಿತ್ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಅಜಿತ್ ಮುಖ ಊದಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ತಕ್ಷಣವೇ ತನಿಖೆ ನಡೆಸಬೇಕೆಂಬ ಮಾತುಗಳು ಕೇಳಿ ಬರುತ್ತಿವೆ.

Ads on article

Advertise in articles 1

advertising articles 2

Advertise under the article

ಸುರ