-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮದುವೆಗೆ ಬರಬೇಡಿ ಎಂಬ ವಧು ಮನವಿ ಮಾಡಿರುವ ವೀಡಿಯೋ ವೈರಲ್: ಕಾರಣ ಇದು!

ಮದುವೆಗೆ ಬರಬೇಡಿ ಎಂಬ ವಧು ಮನವಿ ಮಾಡಿರುವ ವೀಡಿಯೋ ವೈರಲ್: ಕಾರಣ ಇದು!

ಚಾಮರಾಜನಗರ: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ  ಹೆಚ್ಚಳವಾಗುತ್ತಿದೆ‌. ಈ ಹಿನ್ನೆಲೆಯಲ್ಲಿ ನಿಗದಿಯಾಗಿರುವ ಮದುವೆಗೆ ಬರಬೇಡಿ ಎಂದು ವಧುವೊಬ್ಬಳು ಮನವಿ ಮಾಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. 

ಚಾಮರಾಜನಗರ ತಾಲೂಕಿನ ವಿ.ಸಿ‌.ಹೊಸೂರು ಗ್ರಾಮ ನಿವಾಸಿ ಸುಷ್ಮಾ ವಿವಾಹವು ಚನ್ನಪ್ಪನಪುರದ ನಿವಾಸಿ ಶ್ರೇಯಸ್ ರೊಂದಿಗೆ  ನಿಶ್ಚಯವಾಗಿತ್ತು. ಈ ಪ್ರಯುಕ್ತ ನಿನ್ನೆ ಹಾಗೂ ಇಂದು ಮದುವೆ ನಡೆಯಲಿದೆ. ಈಗಾಗಲೇ ಸಂಬಂಧಿಕರಿಗೆ ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಲಾಗಿತ್ತು. ಆದರೆ, ಕೊರೊನಾ ಪ್ರಕರಣದ ಹೆಚ್ಚಳ ಹಿನ್ನೆಲೆಯಲ್ಲಿ ವಧು-ವರರೂ  ಮನೆಯಲ್ಲಿಯೇ ಸರಳ ವಿವಾಹ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. 

ಕೊರೊನಾ ಸೋಂಕು ಹೆಚ್ಚಳವಾಗದಿದ್ದಲ್ಲಿ ಇವರ ವಿವಾಹವು ಚಾಮರಾಜನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನೆರವೇರಬೇಕಿತ್ತು. ಆದರೆ ದಿನದಿಂದ ದಿನಕ್ಕೆ ಸೋಂಕು​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೆ, ಸರಕಾರ ಸಹ ವಿವಾಹ ಸಮಾರಂಭಗಳಿಗೆ ಇಂತಿಷ್ಟೇ ಜನಸಂಖ್ಯೆ ಇರಬೇಕೆಂದು ನಿಯಮಗಳನ್ನು ಹಾಕಿದೆ. 

ಸಾಕಷ್ಟು ಗೊಂದಲಗಳ ಮಧ್ಯೆ ಮಂಟಪದಲ್ಲಿ ಮದುವೆ ಮಾಡುವುದು ಸಮಂಜಸವಲ್ಲ ಎಂಬ ತೀರ್ಮಾನಕ್ಕೆ ಬಂದು ವಧೂ - ವರರ ಎರಡೂ ಕುಟುಂಬವು ವಧುವಿನ ಸ್ವಗೃಹದಲ್ಲೇ ಸರಳವಾಗಿ ವಿವಾಹ ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಯಾರೂ ಮದುವೆಗೆ ಬಾರದೆ, ಇದ್ದಲ್ಲಿಯೇ ಆಶೀರ್ವದಿಸಿ ಎಂದು ವೀಡಿಯೋ ಮಾಡಿ ವಧು ಮನವಿ ಮಾಡಿದ್ದಾಳೆ. ಈ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ