-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮದುವೆಯಾದ 10 ತಿಂಗಳಿಗೆ ದುರಂತ ಅಂತ್ಯಗೊಂಡ ದಂಪತಿ: ಸಾವಿನ ಕಾರಣ ನಿಗೂಢ

ಮದುವೆಯಾದ 10 ತಿಂಗಳಿಗೆ ದುರಂತ ಅಂತ್ಯಗೊಂಡ ದಂಪತಿ: ಸಾವಿನ ಕಾರಣ ನಿಗೂಢ

ಕೊಡಗು: ಮದುವೆಯಾದ ಹತ್ತೇ ತಿಂಗಳಿಗೆ ದಂಪತಿ ದುರಂತವಾಗಿ ಸಾವಿನ ಮನೆ ಸೇರಿದ ಸೇರಿರುವ ಘಟನೆಯೊಂದು ಕೊಡಗು ಜಿಲ್ಲೆಯ ಬಿರುನಾಣಿಯಲ್ಲಿ ನಡೆದಿದೆ.

ಯುವರಾಜ್ (25) ಹಾಗೂ ಪತ್ನಿ ಶಿಲ್ಪಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ. 

ಶಿವಮೊಗ್ಗ ಮೂಲದ ಯುವರಾಜ್  ಹತ್ತು ತಿಂಗಳ ಹಿಂದೆಯಷ್ಟೇ ಶಿಲ್ಪಾರನ್ನು ಮದುವೆಯಾಗಿದ್ದರು. ಯುವರಾಜ್ ಕೊಡಗಿನಲ್ಲಿ ಫಾರೆಸ್ಟ್​ ಗಾರ್ಡ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದ್ದರಿಂದ ದಂಪತಿ ಪೊನ್ನಂಪೇಟೆಯ ಬಿರುನಾಣಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.  ಯುವರಾಜ್ ಎಂದಿನಂತೆ ಕರ್ತವ್ಯ ಮುಗಿಸಿ ಮನೆಗೆ ಬಂದ ವೇಳೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರಿಂದ ಮನನೊಂದ ಯುವರಾಜ್ ಪತ್ನಿಯ ಕಳೇಬರವನ್ನು ಕೆಳಗಿಳಿಸಿ​ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 

ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

Ads on article

Advertise in articles 1

advertising articles 2

Advertise under the article

ಸುರ