-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಫೆ.16ರಿಂದ ಪಿಯು, ಪದವಿ ಕಾಲೇಜುಗಳ ಆರಂಭಕ್ಕೆ ಸರಕಾರ ನಿರ್ಧಾರ

ಫೆ.16ರಿಂದ ಪಿಯು, ಪದವಿ ಕಾಲೇಜುಗಳ ಆರಂಭಕ್ಕೆ ಸರಕಾರ ನಿರ್ಧಾರ

ಬೆಂಗಳೂರು: ಸಿಎಂ‌ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ಬುಧವಾರದಿಂದಲೇ(ಫೆ.16) ಪಿಯು ಹಾಗೂ ಪದವಿ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಫೆ.17ರವರೆಗೆ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಫೆ.16ರಂದು ಮತ್ತೆ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶಕ್ತಿ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹಿಜಾಬ್ ವಿವಾದದ ಸಂಘರ್ಷದ ಸ್ಥಿತಿಗತಿ ಹಾಗೂ ಕಾನೂನು ಸುವ್ಯವಸ್ಥೆಯ ಕುರಿತು ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ‌.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.


ಸಭೆ ಬಳಿಕ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯದ ಪರಿಸ್ಥಿತಿಯ ಬಗ್ಗೆಯೂ ಚರ್ಚೆ ನಡೆದಿದೆ. ಬುಧವಾರದಿಂದ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಕೋರ್ಟ್ ನ ಸೂಚನೆಯನ್ನು ಕಡ್ಡಾಯವಾಗಿ ಎಲ್ಲರೂ ಅನುಸರಿಸಬೇಕು. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದು ತಿಳಿಸಿದರು.

Ads on article

Advertise in articles 1

advertising articles 2

Advertise under the article