-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನಲ್ಲಿ ಮತ್ತೊಂದು ತಿಮಿಂಗಿಲ ವಾಂತಿ ಮಾರಾಟ ಯತ್ನ ಪ್ರಕರಣ ಬೇಧಿಸಿದ ಪೊಲೀಸರು: 2.20 ಕೋಟಿ ರೂ. ಸೊತ್ತಿನೊಂದಿಗೆ, ನಾಲ್ವರು ವಶಕ್ಕೆ

ಮಂಗಳೂರಿನಲ್ಲಿ ಮತ್ತೊಂದು ತಿಮಿಂಗಿಲ ವಾಂತಿ ಮಾರಾಟ ಯತ್ನ ಪ್ರಕರಣ ಬೇಧಿಸಿದ ಪೊಲೀಸರು: 2.20 ಕೋಟಿ ರೂ. ಸೊತ್ತಿನೊಂದಿಗೆ, ನಾಲ್ವರು ವಶಕ್ಕೆ

ಮಂಗಳೂರು: ಕಳೆದ ವಾರವಷ್ಟೇ 3.48 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು ಪತ್ತೆ ಹಚ್ಚಿ ಆರು ಮಂದಿಯನ್ನು ಬಂಧಿಸಿರುವ ಮಂಗಳೂರು ಪೊಲೀಸರು ಮತ್ತೊಂದು ಕೋಟ್ಯಂತರ ರೂ. ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್)ಯನ್ನು ಮಾರಾಟ ಯತ್ನ ಪ್ರಕರಣವನ್ನು ಭೇದಿಸಿದ್ದಾರೆ. 


ನಗರದ ಜೆಪ್ಪಿನಮೊಗರು ಬಳಿ ಮಾರಾಟಕ್ಕೆ ಯತ್ನಿಸಿರುವ 2.20 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿಯೊಂದಿಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಪ್ರಕರಣದಲ್ಲಿ ಕೊಡಗು ಹಾಗೂ ಕೇರಳ ಮೂಲದ ಜಾಬೀರ್ ಎಂ.ಎ.(35), ಆಸೀರ್ ವಿ.ಪಿ.(36), ಶರೀಫ್ ಎನ್.(32), ಶಬಾದ್ ಎಲ್.ಕೆ.(27) ಬಂಧಿತ ಆರೋಪಿಗಳು. 


ಆರೋಪಿಗಳು 2.20 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ಸೊತ್ತು ವಶಪಡಿಸಿಕೊಂಡಿದ್ದಾರೆ. ಬಂಧಿತರಿಂದ 5 ಮೊಬೈಲ್ ಫೋನ್ ಗಳ, 1 ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ