-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಭೂವಿವಾದಕ್ಕೆ ಸಂಬಂಧಿಸಿದಂತೆ ಮನೆಯನ್ನು ನೆಲಸಮ ಮಾಡಲು ಬಂದು ಬೆಂಕಿ ಹಚ್ಚಿ ಇಬ್ಬರನ್ನು ಕೊಂದ 9 ಆರೋಪಿಗಳ ಬಂಧನ

ಭೂವಿವಾದಕ್ಕೆ ಸಂಬಂಧಿಸಿದಂತೆ ಮನೆಯನ್ನು ನೆಲಸಮ ಮಾಡಲು ಬಂದು ಬೆಂಕಿ ಹಚ್ಚಿ ಇಬ್ಬರನ್ನು ಕೊಂದ 9 ಆರೋಪಿಗಳ ಬಂಧನ

ಬಿಹಾರ: ಬಿಹಾರದ ದರ್ಭಂಗ ಜಿಲ್ಲೆಯಲ್ಲಿ ಭೂವಿವಾದವೊಂದಕ್ಕೆ ಸಂಬಂಧಿಸಿದಂತೆ ಮನೆ ನೆಲಸಮ ಮಾಡಲು ಬಂದವರಿಗೆ ಅಡ್ಡ ನಿಂತಿದ್ದ ಮನೆಯವರನ್ನೇ ಸುಟ್ಟುಕೊಂದಿದ್ದ ಪ್ರಕರಣದಲ್ಲಿ ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ. 

ಈ ಪ್ರಕರಣದಲ್ಲಿ ಇಬ್ಬರು ಸಾವಿಗೀಡಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫೆ.10ರಂದು ಶಿವಕುಮಾರ್ ಝಾ ಎಂಬಾತನ ನೇತೃತ್ವದಲ್ಲಿ ಬಿಹಾರದ ದರ್ಭಂಗ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿತ್ತು. ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿದ್ದ ಪಿಂಕಿ ಝಾ ಮತ್ತು ಸಂಜಯ್​ ಝಾ ಫೆ.15ರಂದು ಮೃತಪಟ್ಟಿದ್ದರು. 

ಭೂವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮನೆಯನ್ನು ನೆಲಸಮ ಮಾಡಲು ಬಂದಿದ್ದಕ್ಕೆ ಆ ಮನೆಯ ಮೂವರು ಆಕ್ಷೇಪವೊಡ್ಡಿ ಅಡ್ಡ ನಿಂತಿದ್ದರು. ಆದರೆ ಅದನ್ನು ಲೆಕ್ಕಿಸದೆ ಮುಂದುವರಿದ ವಿರೋಧಿಗಳು ಆ ಮನೆಯ ಮೂವರಿಗೆ ಬೆಂಕಿ ಹಚ್ಚಿದ್ದಾರೆ. ಈ ಪ್ರಕರಣದಲ್ಲಿ 32 ವರ್ಷದ ಗರ್ಭಿಣಿ ಪಿಂಕಿ ಝಾ, ಆಕೆಯ ಸಹೋದರ ಸಂಜಯ್ ಝಾ (30) ಮತ್ತು ಸಹೋದರಿ ನಿಕ್ಕಿಗೆ ಬೆಂಕಿ ಹಚ್ಚಲಾಗಿತ್ತು. 

ಇದೀಗ ನಿಕ್ಕಿ ಝಾ ನೀಡಿರುವ ದೂರು ಹಾಗೂ ವೀಡಿಯೋ ತುಣುಕಿನ ಆಧಾರದ ಮೇಲೆ ಪೊಲೀಸರು ಇದುವರೆಗೆ ಒಟ್ಟು 9 ಮಂದಿಯ ಬಂಧಿಸಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ