-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಹಿಳೆಯನ್ನು ಪುಸಲಾಯಿಸಿ ಬಲವಂತದ ಸಂಭೋಗಕ್ಕೆ ಯತ್ನಿಸಿದ ವಕೀಲ ಅರೆಸ್ಟ್

ಮಹಿಳೆಯನ್ನು ಪುಸಲಾಯಿಸಿ ಬಲವಂತದ ಸಂಭೋಗಕ್ಕೆ ಯತ್ನಿಸಿದ ವಕೀಲ ಅರೆಸ್ಟ್

ಚಿಕ್ಕೋಡಿ: ಮಹಿಳೆಯೋರ್ವನ್ನು ಬಲವಂತದ ಸಂಭೋಗಕ್ಕೆ ಆಹ್ವಾನಿಸಿರುವ ಆರೋಪದಲ್ಲಿ ವಕೀಲನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.

ಪತಿಯ ಸಾರಾಯಿ ಚಟ ಬಿಡಿಸಬೇಕೆಂದು ಔಷಧಿ ಪಡೆಯಲೆಂದು ಸಂತ್ರಸ್ತ ಮಹಿಳೆ ಬಂದಿದ್ದಳು. ಔಷಧಿಯನ್ನು ತಮ್ಮ ಪರಿಚಯಸ್ಥರಿಂದಲೇ ಕೊಡಿಸುತ್ತೇನೆ ಎಂದು ನಂಬಿಸಿ ವಕೀಲ ಸಂಜು ವಡ್ರಗಾಂವಿ ಮಹಿಳೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ. ಅದರ ಬೆನ್ನಲ್ಲೇ ಮಹಿಳೆಯ ಚೀರಾಟ ಕೇಳಿ ವಕೀಲನ ಮನೆ ಮುಂದೆ ಸ್ಥಳೀಯರು ಜಮಾಯಿಸಿದ್ದಾರೆ. ವಕೀಲ ಎಸಗಿರುವ ಕೃತ್ಯ ಬಯಲಾದ ಬೆನ್ನಲ್ಲೇ ಸ್ಥಳದಲ್ಲಿದ್ದ ಜನರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದೀಗ ವಕೀಲನಿಂದ ಮಹಿಳೆಯನ್ನು  ಪೊಲೀಸರು ರಕ್ಷಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿ ಆರೋಪಿ ವಕೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ