-->

ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ: ಚಿಕ್ಕಮ್ಮನೊಂದಿಗೆ ಅಕ್ರಮ ಸಂಬಂಧ ಬಯಲು, ಸಹೋದರನಿಂದಲೇ ಕೊಲೆ

ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ: ಚಿಕ್ಕಮ್ಮನೊಂದಿಗೆ ಅಕ್ರಮ ಸಂಬಂಧ ಬಯಲು, ಸಹೋದರನಿಂದಲೇ ಕೊಲೆ

ಕಲಬುರಗಿ: ನಗರದಲ್ಲಿ ಫೋಟೊಗ್ರಾಫರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ರೈಲ್ವೆ ಪೊಲೀಸರು ಐವರು ಹಂತಕರನ್ನು ಬಂಧಿಸಿದ್ದಾರೆ. 

ಮಹಾಂತೇಶ್ ಆಳಂದಕರ್, ಬಸವರಾಜ್ ಸಲಗಾರ್, ಫಕರಿಪ್ಪ ಸಲಗಾರ್, ಸಿದ್ದಾರೂಢ ಕೋರಬಾರ್ ಹಾಗೂ ಅಶೋಕ ಜಮಾದಾರ್​ ಬಂಧಿತ ಆರೋಪಿಗಳು. 

ಕೊಲೆಯಾದ ಶಿವಕುಮಾರ್ ಪ್ರಮುಖ ಆರೋಪಿ ಮಹಾಂತೇಶ್​ ತಾಯಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಮಹಾಂತೇಶ್​ಗೆ ಶಿವಕುಮಾರ್​ ದೊಡ್ಡಪ್ಪನ ಮಗನಾಗಿದ್ದು, ವರಸೆಯಲ್ಲಿ ಇಬ್ಬರಿಬ್ಬರೂ ಸಹೋದರರಾಗಿದ್ದರು. ಆದರೆ ಶಿವಕುಮಾರ್ ತನ್ನ ಚಿಕ್ಕಮ್ಮನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನ್ನು ಮಹಾಂತೇಶ್​ ಕಣ್ಣಾರೆ ಕಂಡಿದ್ದ ಎನ್ನಲಾಗಿದೆ.

ವರಸೆಯಲ್ಲಿ ತಾಯಿಯಾಗುವವಳೊಂದಿಗೆ ಶಿವಕುಮಾರ್ ಅಕ್ರಮ ಸಂಬಂಧ ಹೊಂದಿದ್ದ. ಆದ್ದರಿಂದ ಆಕೆಯ ಮಗ ಮಹಾಂತೇಶ್ ದೊಡ್ಡಪ್ಪನ ಮಗನ ಶಿವಕುಮಾರ್ ಮೇಲೆ ಸೇಡು ತಿರಿಸಿಕೊಳ್ಳಲು ಮಾವ ಬಸವರಾಜ್ ನೊಂದಿಗೆ ಸೇರಿ ಹತ್ಯೆಗೆ​ ಸಂಚು ರೂಪಿಸಿದ್ದ. 

ಜನವರಿ 25 ರಂದು ಆಳಂದ ತಾಲೂಕಿನ ಶ್ರೀಚಂದ ಗ್ರಾಮದಿಂದ ಶಿವಕುಮಾರ್​ನನ್ನು ಬೈಕ್ ನಲ್ಲಿ ಕರೆದುಕೊಂಡು ಬಂದಿದ್ದ ಮಹಾಂತೇಶ್, ಹತ್ಯೆ ಮಾಡಿ ಕಲಬುರಗಿ ಹೊರವಲಯದ ಸಾವಳಗಿ ಬಬಲಾದ್ ರೈಲ್ವೆ ಹಳಿಯ ಮೇಲೆ ಬಿಸಾಕಿ ಎಸ್ಕೇಪ್ ಆಗಿದ್ದರು. ಶಿವಕುಮಾರ್​ ರುಂಡ ಮುಂಡ ಬೇರೆ ಮಾಡಿ ಭೀಕರವಾಗಿ ಹತ್ಯೆಗೈದು ರೈಲ್ವೆ ಹಳಿಯ ಮೇಲೆ ಎಸೆದಿದ್ದರು.‌ ಆ ಬಳಿಕ ಕೃತ್ಯವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಹಂತಕರು ಮುಂದಾಗಿದ್ದರು. 

ಆದರೆ, ಈ ಬಗ್ಗೆ ಅನುಮಾನಗೊಂಡು ತನಿಖೆ ನಡೆಸಿರುವ ರೈಲ್ವೆ ಪೊಲೀಸರಿಗೆ  ಘಟನೆಯ ಅಸಲಿಯತ್ತು ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



Ads on article

Advertise in articles 1

advertising articles 2

Advertise under the article