-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮದ್ಯದ ಮತ್ತಲ್ಲಿ ಸ್ನೇಹಿತರ ಮಧ್ಯೆ ಬಾರ್​ನಲ್ಲಿ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ಮದ್ಯದ ಮತ್ತಲ್ಲಿ ಸ್ನೇಹಿತರ ಮಧ್ಯೆ ಬಾರ್​ನಲ್ಲಿ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ಮೈಸೂರು: ಮದ್ಯದ ಮತ್ತಲ್ಲಿ ಸ್ನೇಹಿತರ ಮಧ್ಯೆ ಬಾರ್​ನಲ್ಲಿ ಆರಂಭವಾದ ಜಗಳ, ಬಾರ್​ನಿಂದ ಹೊರಬಂದ ಬಳಿಕವೂ ಮುಂದುವರೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. 

ಮೈಸೂರಿನ ಆಲನಹಳ್ಳಿಯಲ್ಲಿ ಈ ಪ್ರಕರಣ ನಡೆದಿದೆ. ಆಲನಹಳ್ಳಿ ಬಾರ್ ಆ್ಯಂಡ್​ ರೆಸ್ಟೋರೆಂಟ್​ವೊಂದರಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಸಂದರ್ಭ ಸ್ನೇಹಿತರ ಮಧ್ಯೆ ಜಗಳ ಆರಂಭವಾಗಿತ್ತು. ನಿವೇಶನವೊಂದರ ವಿಚಾರವಾಗಿ ಶುರುವಾದ ಈ ಜಗಳ ಬಾರ್​ನಿಂದ ಹೊರಬಂದ ಬಳಿಕವೂ ಮುಗಿದಿರಲಿಲ್ಲ.
 
ಬಾರ್​ನಿಂದ ಹೊರಬಂದಾಗ ನಡೆದ ವಾಗ್ವಾದದ ಸಂದರ್ಭ ಸ್ನೇಹಿತರಾದ ರಾಕೇಶ್, ಮಹೇಶ್, ಪ್ರಮೋದ್‌ ಅವರು ಕಿರಣ್​ಗೆ ಚಾಕುವಿನಿಂದ ಇರಿದಿದ್ದರು. ಗಾಯಗೊಂಡ ಕಿರಣ್ ಸಾವಿಗೀಡಾಗಿದ್ದು, ರಾಕೇಶ್ ಹಾಗೂ ಮಹೇಶ್​ನನ್ನು ಆಲನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮೋದ್ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಹುಡುಕಾಟ ಮುಂದುವರಿದಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article