-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಆಮ್ಲೇಟ್ ಮಾಡಿಕೊಡಲಿಲ್ಲವೆಂದು ಪತ್ನಿಯನ್ನೇ ಹತ್ಯೆ ಮಾಡಿದ ಕಿರಾತಕ ಪತಿ!

ಆಮ್ಲೇಟ್ ಮಾಡಿಕೊಡಲಿಲ್ಲವೆಂದು ಪತ್ನಿಯನ್ನೇ ಹತ್ಯೆ ಮಾಡಿದ ಕಿರಾತಕ ಪತಿ!

ಪಟನಾ: ಆಮ್ಲೆಟ್ ಮಾಡಿಕೊಡದ ಪತ್ನಿಯನ್ನು ಪತಿಯೇ ಬರ್ಬರವಾಗಿ ಕೊಂದು ಹಾಕಿರುವ ಆತಂಕಕಾರಿ, ಅಮಾನವೀಯ ಘಟನೆಯೊಂದು ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಪತಿ ಬಳಿಕ ಆಕೆಯ ಮೃತದೇಹವನ್ನು ಸೀಲಿಂಗ್​ ಫ್ಯಾನ್​ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ ಈ ಹಂತಕ ಪತಿರಾಯ. 

ಅಜಿತ್​ ಸಿಂಗ್ ಪತ್ನಿಯನ್ನೇ ಹತ್ಯೆಗೈದ ಆರೋಪಿ. ಈತ ನಿವೃತ್ತ ಸಬ್​ ಇನ್ಸ್​ಪೆಕ್ಟರ್​ ಪುತ್ರ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯ ತಂದೆ ನಿವೃತ್ತ ಸಬ್​ ಇನ್ಸ್​ಪೆಕ್ಟರ್​ ರಾಮ್​ ವಿನಯ್​ಸಿಂಗ್ ದೂರಿನನ್ವಯ ಅಜಿತ್​ ಸಿಂಗ್​ ವಿರುದ್ಧ ಸೀತಾಮರ್ಹಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜಿಲ್ಲೆಯ ಬೆಲ್ಹಿ ಜೈರಾಮ್​ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಪ್ರಕರಣ ನಡೆದಿತ್ತು. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಇದೀಗ ಪೊಲೀಸರು ಬಲೆ ಬೀಸಿದ್ದಾರೆ. 

ಘಟನೆಯ ಬಗ್ಗೆ ಮಾತನಾಡಿರುವ ರಾಮ್​ ವಿನಯ್​ ಸಿಂಗ್, ನನ್ನ ಮಗ ಮದ್ಯ ವ್ಯಸನಿಯಾಗಿದ್ದು, ಗುರುವಾರ ಸಂಜೆ ಪಾನಮತ್ತನಾಗಿ ಮನೆಗೆ ಬಂದಿದ್ದಾನೆ. ಬರುವಾಗ ಜತೆಯಲ್ಲಿ ಮೊಟ್ಟೆಗಳನ್ನು ತಂದಿದ್ದ. ಆಮ್ಲೆಟ್​ ಮಾಡಿಕೊಡುವಂತೆ ಪತ್ನಿ ನೀತು ಸಿಂಗ್​ (30)ಗೆ ಹೇಳಿದ್ದಾನೆ. ಆದರೆ, ಆಕೆ ಆಮ್ಲೇಟ್ ಮಾಡಲು ನಿರಾಕರಿಸಿದ್ದಾಳೆ. ಇಂದು ಗುರುವಾರ ಮೊಟ್ಟೆ ಮಾಡುವಂತಿಲ್ಲ ಎಂದು ಹೇಳಿದ್ದಾಳೆ. 

ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಪತಿಯ ಮದ್ಯ ವ್ಯಸನದಿಂದ ನೀತು ಬೇಸತ್ತು ಹೋಗಿದ್ದಳು. ಈ ಹಿಂದೆಯು ಆತನ ಚಟದ ವಿರುದ್ಧ ಪ್ರತಿಭಟಿಸಿದ್ದಳು. ಗುರುವಾರವೂ ಅದನ್ನೇ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಅಜಿತ್​ ಮೊದಲು ಆಕೆಯನ್ನು ಬೆಡ್​ರೂಮ್​ನಲ್ಲಿ ಮೃಗೀಯವಾಗಿ ಹಲ್ಲೆ ಮಾಡಿದ್ದಾನೆ. 

ಇದಾದ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಸೀಲಿಂಗ್​ ಫ್ಯಾನ್​ಗೆ ನೇತು ಹಾಕಿದ್ದಾನೆ. ಕೆಲವೇ ಸಮಯದಲ್ಲಿ ನೀತು ಕಿರುಚಾಡುವುದು ನಿಂತು ಹೋಗಿತ್ತು. ನಾವು ಇಬ್ಬರೂ ಸಮಾಧಾನಗೊಂಡಿರಬಹುದೆಂದು ಭಾವಿಸಿದ್ದೆವು. ಆದರೆ, ಕೆಲವೇ ಕ್ಷಣದಲ್ಲಿ ಅಜಿತ್​ ಮನೆಯಿಂದ ಆಚೆ ಓಡಿ ಹೋಗಿದ್ದಾನೆ. ಇದಾದ ಬಳಿಕ ಕೋಣೆ ಒಳಗೆ ಹೋಗಿ ನೋಡಿದಾಗ ನೀತು ಮೃತದೇಹ ಫ್ಯಾನಿನಲ್ಲಿ ನೇತಾಡುತ್ತಿತ್ತು. ಅದನ್ನು ನೋಡಿ ನಮಗೆ ಆಘಾತವಾಯಿತು ಎಂದು ರಾಮ್​ ವಿನಯ್​ ಸಿಂಗ್ ಹೇಳಿದ್ದಾರೆ. ಎಫ್​ಐಆರ್​ ನಲ್ಲಿ ವಿನಯ್​ ಸಿಂಗ್​ ಹೇಳಿಕೆಯನ್ನು ದಾಖಲಿಸಲಾಗಿದೆ. ಠಾಣಾಧಿಕಾರಿ ಎಚ್​.ಎಸ್​. ಕುಮಾರ್​ ಎಂಬುವರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ