-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಟೀ ಕುಡಿಯಲೆಂದು ಅಂಗಡಿ ಬಾಗಿಲು ಮುಚ್ಚದೆ ಹೋದ ಮಾಲಕನಿಗೆ ಕಾದಿತ್ತು ಶಾಕ್!

ಟೀ ಕುಡಿಯಲೆಂದು ಅಂಗಡಿ ಬಾಗಿಲು ಮುಚ್ಚದೆ ಹೋದ ಮಾಲಕನಿಗೆ ಕಾದಿತ್ತು ಶಾಕ್!

ದಾವಣಗೆರೆ: ಹತ್ತಿದಲ್ಲೇ ಇದ್ದ ಹೊಟೇಲ್ ಗೆ ಟೀ ಕುಡಿಯಲೆಂದು ಅಂಗಡಿ ಬಾಗಿಲು ಮುಚ್ಚದೇ ಹೊರಗಡೆ ಹೋದ ಮಾಲಕ ಈಗ ತಲೆಮೇಲೆ ಕೈಹೊತ್ತು ಕುಳಿತಿರಬೇಕಾದ ಪರಿಸ್ಥಿತಿ ಎದುರಾಗಿದೆ. ದಾವಣಗೆರೆಯಲ್ಲಿ ಈ ಒಂದು ಘಟನೆ ನಡೆದಿದೆ. 

ಅಂಗಡಿ ಮಾಲಕ ಟೀ ಕುಡಿಯಲೆಂದು ಹೋಗಿದ್ದಾನೆ. ಈ  ಸಂದರ್ಭ ಅಂಗಡಿಯಲ್ಲಿ ಯಾರೂ ಇಲ್ಲದಿರುವುನ್ನು ಗಮನಿಸಿರುವ ಆಗಂತುಕನೋರ್ವ ಕ್ಯಾಶ್​ ಕೌಂಟರ್​ನಲ್ಲಿದ್ದ 10 ಸಾವಿರ ರೂ. ಹಣ ಕದ್ದು ಪರಾರಿಯಾಗಿದ್ದಾನೆ. ಈ ಘಟನೆ ದಾವಣಗೆರೆಯ ಹದಡಿ‌ ರಸ್ತೆಯಲ್ಲಿರುವ ಕಲ್ಲೇಶ್ವರ ಟೈಲ್ಸ್ ಶಾಪ್‌ನಲ್ಲಿ ನಡೆದಿದೆ. ಹಣ ಕಳುವು ಮಾಡಿರುವ ಸಂಪೂರ್ಣ ದೃಶ್ಯ ಸಿಸಿ‌‌ಟಿವಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. 

ಟೀ ಕುಡಿದು ಬಂದ ಮಾಲಕ ಕ್ಯಾಶ್​ ಕೌಂಟರ್​ ನೋಡಿದಾಗ ಹಣ ಇಲ್ಲದಿರುವುದನ್ನು ಗಮನಿಸಿ ಶಾಕ್​ ಆಗಿದ್ದಾರೆ. ತಕ್ಷಣ ಆತ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ