-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಮೆಸ್ಕಾಂ ಎಇಇ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಮಂಗಳೂರು: ಮೆಸ್ಕಾಂ ಎಇಇ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಮಂಗಳೂರು: ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆದಿದೆ.

ಕಳೆದ ಹತ್ತು ವರ್ಷಗಳಿಂದಲೂ ದಯಾಲು ಸುಂದರ್ ರಾಜ್ ಮಂಗಳೂರಿನ ಮೆಸ್ಕಾಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು‌. ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಅನ್ನು ಹೊಂದಿದ್ದರೂ, ಆ ಮನೆಯನ್ನು ಬಾಡಿಗೆಗೆ ನೀಡಿದ್ದಾರೆ‌. ಸದ್ಯ ಮಲ್ಲಿಕಟ್ಟೆಯಲ್ಲಿರುವ ಲೋಬೊಲೇನ್ ರೋಡ್ ನಲ್ಲಿರುವ ವಿಜಯ ಅಪಾರ್ಟ್‌ಮೆಂಟ್ ನಲ್ಲಿ ಬಾಡಿಗೆಗೆ ವಾಸವಾಗಿದ್ದಾರೆ. 

ಸದ್ಯ ದಯಾಲು ಸುಂದರ್ ರಾಜ್ ಎರಡು ಮನೆಗಳು ಹಾಗೂ ಕುಲಶೇಖರದ ಕಚೇರಿಯ ಮೇಲೆ ದಾಳಿ ನಡೆದಿದೆ. ಮಂಗಳೂರು ಎಸಿಬಿ ಎಸ್ಪಿ ಸಿ.ಎ.ಸೈಮನ್ ತಂಡ ಮತ್ತು ಕಾರವಾರ ಎಸಿಬಿ ತಂಡ ದಾಳಿ ನಡೆಸಿ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ