-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ದೈವಸ್ಥಾನಕ್ಕೆ ಅಕ್ರಮ ಪ್ರವೇಶಿಸಿ ರಕ್ತ ಹರಿಸಿದ ಆರೋಪಿ ಬಂಧನ!

ಮಂಗಳೂರು: ದೈವಸ್ಥಾನಕ್ಕೆ ಅಕ್ರಮ ಪ್ರವೇಶಿಸಿ ರಕ್ತ ಹರಿಸಿದ ಆರೋಪಿ ಬಂಧನ!

ಮಂಗಳೂರು: ನಗರದ ಹೊರವಲಯದ ಕೈಕಂಬದ ಕಂದಾವರ ಎಂಬಲ್ಲಿ ಕೋಡ್ದಬ್ಬು ದೈವಸ್ಥಾನಕ್ಕೆ ರಾತ್ರಿ ವೇಳೆ ಅತಿಕ್ರಮವಾಗಿ ಪ್ರವೇಶ ಮಾಡಿ ಅನ್ಯಕೋಮಿನ ವ್ಯಕ್ತಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಆತನನ್ನು ಬಜ್ಪೆ ಪೊಲೀಸರು ದೂರು ದಾಖಲಾದ ಕೆಲವೇ ಕ್ಷಣದಲ್ಲಿ ಬಂಧಿಸಿದ್ದಾರೆ.


ಕಂದಾವರ ಚರ್ಚ್ ಬಳಿ ನಿವಾಸಿ ಸಾಹುಲ್ ಹಮೀದ್(27) ಬಂಧಿತ ಆರೋಪಿ. ಕಂದಾವರ ಪದವು ಶ್ರೀ ಕೋಡ್ದಬ್ಬು ದೈವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಆರೋಪಿ ಸಾಹುಲ್ ಹಮೀದ್ ರಾಹುಗುಳಿಗ ದೈವದ ಕಲ್ಲಿನಲ್ಲಿ ಉರಿಯುತ್ತಿದ್ದ ದೀಪವನ್ನು ನಂದಿಸಿದ್ದಾನೆ. ಅಲ್ಲದೆ ಈತ ತನ್ನ ಕೈಗೆ ಗಾಯಮಾಡಿಕೊಂಡು ದೈವಸ್ಥಾನಕ್ಕೆ ಪ್ರವೇಶಿಸಿರುವುದಾಗಿ ತಿಳಿದು ಬಂದಿದೆ. ಆ ಗಾಯದಲ್ಲಿ ಸುರಿಯುವ ರಕ್ತವನ್ನು ರಾಹುಗುಳಿಗನ ಕಲ್ಲಿಗೆ ರಕ್ತ‌ ಸುರಿಸಿದ್ದಾನೆ. ಅಲ್ಲದೆ ದೈವಸ್ಥಾನದ ಬಲ ಬದಿಯಲ್ಲಿರುವ ಆಯದ ಕಲ್ಲಿಗೂ, ದೈವಸ್ಥಾನದ ಅಂಗಣದ ಸುತ್ತಲೂ ರಕ್ತ ಸುರಿಸಿದ್ದಾನೆ. 


ಈ ಮೂಲಕ ಆರೋಪಿ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ, ನಂಬಿಕೆಗೆ ಧಕ್ಕೆ ತಂದಿರುವುದಾಗಿ ದೈವಸ್ಥಾನದ ಅಧ್ಯಕ್ಷ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಇದೀಗ ಪ್ರಕರಣ ದಾಖಲಾದ ಒಂದೇ ಗಂಟೆಯಲ್ಲೇ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Ads on article

Advertise in articles 1

advertising articles 2

Advertise under the article

ಸುರ