-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಬಕ ಶಾಲೆಯ ಬೀಗ ಮುರಿದು ಲ್ಯಾಪ್‌ಟಾಪ್ ಕಳವುಗೈದ ಆರೋಪಿ ಪೊಲೀಸ್ ವಶಕ್ಕೆ

ಕಬಕ ಶಾಲೆಯ ಬೀಗ ಮುರಿದು ಲ್ಯಾಪ್‌ಟಾಪ್ ಕಳವುಗೈದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಪುತ್ತೂರು ತಾಲೂಕಿನ ಕಬಕ ದ.ಕ.ಜಿ.ಪಂ.ಹಿ.ಪ್ರಾ. ಶಾಲಾ ಕಚೇರಿಯ ಕೊಠಡಿಯ ಬೀಗ ಮುರಿದು ಲ್ಯಾಪ್ ಟಾಪ್ ಕಳವುಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಬದ್ರಿಯಾನಗರ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(22) ಬಂಧಿತ ಆರೋಪಿ.

ಆರೋಪಿ ಮೊಹಮ್ಮದ್ ಅಬ್ದುಲ್ ಫಯಾನ್ ತನ್ನ ಸಹಚರ ಸುಹೇಬ್ ಎಂಬಾತನೊಂದಿಗೆ ಸೇರಿಕೊಂಡು 2020 ಫೆ.12ರಂದು ರಾತ್ರಿ ವೇಳೆ  ಪುತ್ತೂರು ತಾಲೂಕಿನ ಕಬಕ ದ.ಕ.ಜಿ.ಪಂ.ಹಿ.ಪ್ರಾ. ಶಾಲಾ ಕಚೇರಿಯ ಕೊಠಡಿಯ ಬೀಗ ಮುರಿದಿದ್ದ. ಬಳಿಕ ಅಲ್ಲಿದ್ದ ನಾಲ್ಕು ಕಪಾಟುಗಳನ್ನು ಜಾಲಾಡಿ ಕಡತ, ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಿದ್ದ. ಬಳಿಕ ಅಲ್ಲಿದ್ದ 24,990 ರೂ. ಮೌಲ್ಯದ ಲ್ಯಾಪ್ ಟಾಪ್ ಕಳವುಗೈದಿದ್ದ. ಮರುದಿನ ಬೆಳಗ್ಗೆ ಶಾಲೆಗೆ ಸಿಬ್ಬಂದಿ ಬಂದಾಗ ವಿಚಾರ ತಿಳಿದು ಶಾಲಾ ಮುಖ್ಯ ಶಿಕ್ಷಕಿ ಈ ಬಗ್ಗೆ ಪೊಲೀಸ್ ದೂರು ನೀಡಿದ್ದರು.

ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆತ ಬೆಳಗಾವಿ ಜೈಲಿನಲ್ಲಿದ್ದನು. ಇದೀಗ ಆತ ತಾನು ಶಾಲೆಯ ಬೀಗ ಮುರಿದು ಲ್ಯಾಪ್ ಟಾಪ್ ಕದ್ದಿರುವುದಾಗಿ ತನಿಖೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಮೇರೆಗೆ 2022ರ ಮಾರ್ಚ್ 18ರಂದು ಬೆಳಗಾವಿ ಕಾರಾಗೃಹದಿಂದ ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಆತ ಹೇಳಿದಂತೆ ಮಂಗಳೂರಿನ ಅಂಗಡಿಗೆ ತೆರಳಿ ಪೊಲೀಸರು ಲ್ಯಾಪ್ ಟಾಪ್ ಅನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ