-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಿಜಾಬ್ ತೀರ್ಪು ಪ್ರಕಟ: ನಾಳೆ ದ.ಕ.ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ; ಡಿಸಿ ಆದೇಶ

ಹಿಜಾಬ್ ತೀರ್ಪು ಪ್ರಕಟ: ನಾಳೆ ದ.ಕ.ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ; ಡಿಸಿ ಆದೇಶ

ಮಂಗಳೂರು: ಹಿಜಾಬ್ ವಿವಾದದ ತೀರ್ಪನ್ನು ‌ಹೈಕೋರ್ಟ್ ಪ್ರಕಟಿಸುವ ಹಿನ್ನೆಲೆಯಲ್ಲಿ ನಾಳೆ ದ.ಕ‌.ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಅಲ್ಲದೆ ಜಿಲ್ಲೆಯಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ ಈಗಾಗಲೇ ‌ನಿಗದಿಯಾಗಿರುವ ಪರೀಕ್ಷೆಗಳು ಮಾತ್ರ ನಡೆಯಲು ಯಾವುದೇ ಅಡ್ಡಿಯಿಲ್ಲ‌. ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ನಾಳೆ ನಡೆಯಲಿರುವ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ ಆಯೋಜನೆ ಮಾಡಿರುವ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆ ನಿಗದಿಯಾಗಿದ್ದಂತೆ ನಿರಾತಂಕವಾಗಿ ನಡೆಯಲಿದೆ ಎಂದು ಡಿಸಿ ಆದೇಶಿಸಿದ್ದಾರೆ.

Ads on article

Advertise in articles 1

advertising articles 2

Advertise under the article