-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅನಧಿಕೃತ ಈಜುಕೊಳಕ್ಕೆ ಇಳಿದ ವಿದ್ಯಾರ್ಥಿ ಮೃತ್ಯು: ಮಾಲಕ ಪರಾರಿ

ಅನಧಿಕೃತ ಈಜುಕೊಳಕ್ಕೆ ಇಳಿದ ವಿದ್ಯಾರ್ಥಿ ಮೃತ್ಯು: ಮಾಲಕ ಪರಾರಿ

ವಿಜಯನಗರ: ಅನಧಿಕೃತ ಈಜುಕೊಳದಲ್ಲಿ ಈಜಲು ಹೋದ ದ್ವಿತೀಯ ವಿದ್ಯಾರ್ಥಿಯೋರ್ವನು ಮೃತಪಟ್ಟ ಘಟನೆ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಈಜುಕೊಳದ ಮಾಲಕ ಪರಾರಿ ಆಗಿದ್ದಾನೆ.‌ 

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕು ಮಾಚಿಹಳ್ಳಿ ಗ್ರಾಮದ ಚೇತನ್ ಮೃತಪಟ್ಟ ವಿದ್ಯಾರ್ಥಿ. 

ಚೇತನ್ ತನ್ನ ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ್ದು, ಅಲ್ಲಿ ಈಜುಕೊಳಕ್ಕೆ ಇಳಿದ ಸಂದರ್ಭ ಈ ದುರಂತ ಸಂಭವಿಸಿದೆ. ಇಲ್ಲಿನ ಶೃಂಗಾರತೋಟ ಸಮೀಪ ಇರುವ ನಂದಿ ವೈಟ್‌ಹೌಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸರ್ಕಾರದ ಯಾವುದೇ ಅನುಮತಿ ಪಡೆಯದೆ ಇಲ್ಲಿ ಈಜುಕೊಳ ಹಾಗೂ ಸಭಾಂಗಣವನ್ನು ನಿರ್ಮಿಸಲಾಗಿದೆ. ಈ ದುರ್ಘಟನೆ ನಡೆಯುತ್ತಿದ್ದಂತೆ ನಂದಿ ವೈಟ್‌ಹೌಸ್ ಮಾಲಕ ರಾಜು ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಈ ಬಗ್ಗೆ ಹರಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article