-->

ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ ತಾನೂ ಕತ್ತು ಕೊಯ್ದುಕೊಂಡ ಪತಿ!

ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ ತಾನೂ ಕತ್ತು ಕೊಯ್ದುಕೊಂಡ ಪತಿ!

ಆನೇಕಲ್: ಮಲಗಿದ್ದ ಪತ್ನಿಯ ಕತ್ತು ಕೊಯ್ದು ಕೊಲೆಗೈದ ಪತಿ ಬಳಿಕ ತಾನೂ ಕತ್ತು ಕಾಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಸಂಭವಿಸಿದೆ. ಈ ಭೀಕರ ಘಟನೆ ಇಂದು  ಬೆಳ್ಳಂಬೆಳಗ್ಗೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಾರೆ. 

ಲಾವಣ್ಯ(30) ಕೊಲೆಯಾದ ದುರ್ದೈವಿ. ಹತ್ಯೆ ಮಾಡಿ ಕತ್ತು ಕೊಯ್ದುಕೊಂಡ ಸಂಪತ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

12 ವರ್ಷಗಳ ಹಿಂದೆ ಲಾವಣ್ಯ ಹಾಗೂ ಸಂಪತ್​ ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ 10 ದಿನಗಳಿಂದ ದಂಪತಿ ಮಧ್ಯೆ ಜಗಳ ನಡೆಯುತ್ತಿತ್ತು. ರವಿವಾರ ಲಾವಣ್ಯ ಮನೆಯವರು ಬಂದು ಪಂಚಾಯತಿಗೆ ಮಾಡಿ ಇಬ್ಬರಿಗೂ ಬುದ್ಧಿವಾದ ಹೇಳಿ ಹೋಗಿದ್ದರು. ಅದರ ಮರುದಿನ ಬೆಳ್ಳಂಬೆಳಗ್ಗೆಯೇ ಸಂಪತ್​, ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಅಡ್ಡ ಬಂದ ಪುತ್ರ ಭಾರ್ಗವ್​ನ ಕೈ ಕೊಯ್ದು ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡು ನೋವಿನಿಂದ ಚೀರಾಡುತ್ತಾ ಮೊದಲ ಮಹಡಿ ಮನೆಯಿಂದ ಕೆಳಗೆ ಓಡಿಕೊಂಡು ಬಂದು ಚರಂಡಿಗೆ ಬಿದ್ದಿದ್ದಾನೆ.

ಸಂಪತ್ ​ನ ಚೀರಾಟ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಆತನ ಸ್ಥಿತಿ ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸಂಪತ್ ಹಾಗೂ ಪುತ್ರ ಭಾರ್ಗವ್​ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆಯೊಳಗೆ ರಕ್ತದದ ಮಡುವಿನಲ್ಲಿ ಲಾವಣ್ಯಳ ಶವ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ. ಕುಡಿತ ಚಟ ಹೊಂದಿದ್ದ ಸಂಪತ್ ಮನೆಯಲ್ಲಿ ಪದೇಪದೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.

Ads on article

Advertise in articles 1

advertising articles 2

Advertise under the article