-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪಾರ್ಟಿ ಮುಗಿಸಿ ಗೆಳೆಯರೊಂದಿಗೆ ಬಂದ ಯುವತಿಗೆ ಕ್ಯಾಬ್ ಚಾಲಕ ಮಾಡಿದ್ದೇನು ಗೊತ್ತೇ?

ಪಾರ್ಟಿ ಮುಗಿಸಿ ಗೆಳೆಯರೊಂದಿಗೆ ಬಂದ ಯುವತಿಗೆ ಕ್ಯಾಬ್ ಚಾಲಕ ಮಾಡಿದ್ದೇನು ಗೊತ್ತೇ?

ಬೆಂಗಳೂರು: ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿರುವ ಆರೋಪದಲ್ಲಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ‌. ಮಾರ್ಚ್ 9ರಂದು ತಡರಾತ್ರಿ 1 - 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ‌. 

ಕಾಕೋಳು ಮೂಲದ ಕ್ಯಾಬ್ ಚಾಲಕ ಮಂಜುನಾಥ್ ಬಂಧಿತ ಆರೋಪಿ. ನಿನ್ನೆ ತಡರಾತ್ರಿ ಸಂತ್ರಸ್ತ ಯುವತಿ ಹಾಗೂ ಆಕೆಯ ಗೆಳೆಯರಿಬ್ಬರು ಪಾರ್ಟಿ ಮುಗಿಸಿ ಮನೆಗೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಾರೆ. ಕ್ಯಾಬ್​​ನಿಂದ ಇಳಿಯುವ ಸಂದರ್ಭ ಯುವತಿ ಚಾಲಕನ ಸಹಾಯ ಕೇಳಿದ್ದಾಳೆ. 

ಆದರೆ ಈ ಸಂದರ್ಭ ಚಾಲಕ ಆಕೆಯ ಖಾಸಗಿ ಅಂಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಆರೋಪಿಸಿ ಯುವತಿ ಪೊಲೀಸ್ ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ಬುಧವಾರ ರಾತ್ರೋರಾತ್ರಿ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ