-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವೈದ್ಯೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ ಆರೋಪ: ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಪ್ರತಿಭಟನೆ

ವೈದ್ಯೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ ಆರೋಪ: ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ವೈದ್ಯೆಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿರುವುದಾಗಿ ‌ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ಧರಣಿ ನಡೆಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ಗ್ರಾಮದ ನಿವಾಸಿ ಸವಿತಾ (22) ಮೃತಪಟ್ಟ ಬಾಣಂತಿ. 

ಮಾರ್ಚ್ 10ರಂದು ಬೆಳಗ್ಗೆ 9 ಗಂಟೆಗೆ ಸವಿತಾರನ್ನು ಹೆರಿಗೆಗೆಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅರ್ಚನಾ ಎಂಬ ವೈದ್ಯೆ ಸವಿತಾಗೆ ಸಹಜ ಹೆರಿಗೆ ಮಾಡಿಸಿದ್ದಾರೆ. ಆದರೆ ಹೆರಿಗೆಯ ಬಳಿಕ ಬಾಣಂತಿಗೆ ರಕ್ತ ಸ್ರಾವ ಹೆಚ್ಚಾಗಿದೆ. ಅದಕ್ಕಾಗಿ ಬೇರೆ ಕಡೆಯಿಂದ ರಕ್ತ ತರುವಂತೆ ಸೂಚಿಸಿದ್ದಾರೆ. ಆ ಬಳಿಕ ಆಕೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಲಾಗಿದೆ. 

ಅಲ್ಲದೆ ಮಧ್ಯಾಹ್ನ 2 ಗಂಟೆಯ ಬಳಿಕ ಮಗು ಮತ್ತು ತಾಯಿಯನ್ನು ಆಸ್ಪತ್ರೆಯಿಂದ ಹೊರಗೆ ಕಳಿಸಲಾಗಿದೆ. ಹೆರಿಗೆಯ ಬಳಿಕ ತಾಯಿ-ಮಗು ಚೆನ್ನಾಗಿದ್ದಾರೆ ಎಂದು ತಿಳಿಸಿದ್ದ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರೊಚ್ಚಿಗೆದ್ದ ಮೃತ ಬಾಣಂತಿಯ ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ಧರಣಿ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ