-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಏನೋ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಚಿತ್ರಕಲಾವಿದ: ಗ್ಯಾಸ್ ಸಿಲಿಂಡರ್ ಆನ್ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಏನೋ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಚಿತ್ರಕಲಾವಿದ: ಗ್ಯಾಸ್ ಸಿಲಿಂಡರ್ ಆನ್ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಕೊಡಗು: ಕೆಲವೊಂದು ಬಾರಿ ಕೆಲವರು ಏನೋ ಮಾಡಲು ಹೋಗಿ ಇನ್ನೇನೋ ಆಗುತ್ತದೆ. ಅದೇ ರೀತಿಯ ಪರಿಸ್ಥಿತಿ ಇಲ್ಲೊಂದು ಕಡೆ ನಡೆದಿದೆ. ನಗರಸಭೆಯ ಕೌನ್ಸಿಲರ್ ಹಾಗೂ ಕಮಿಷನರ್​ರನ್ನು ವ್ಯಂಗ್ಯವಾಗಿ ಚಿತ್ರಿಸಿ ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿದ್ದ ಚಿತ್ರಕಲಾವಿದನೋರ್ವ ಇದೀಗ ಅದರ ಪರಿಸ್ಥಿತಿಯನ್ನು ಎದುರಿಸಲು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿರುವ ಪ್ರಕರಣವೊಂದು ಮಡಿಕೇರಿಯಲ್ಲಿ ನಡೆದಿದೆ. 

ಮಡಿಕೇರಿ ನಗರದ ಚೈನ್ ಗೇಟ್ ಬಳಿಯ ನಿವಾಸಿ, ಚಿತ್ರಕಲಾವಿದ ಸಂದೀಪ್ ನಗರಸಭೆಗೆ ಸೇರಿರುವ ಸ್ಥಳದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿಯನ್ನೂ ಹಾಕಿದ್ದರು. ಈ ನಡುವೆ ನಗರಸಭೆಯ ಕೌನ್ಸಿಲರ್ ಹಾಗೂ ಕಮಿಷನರ್ ಅವರನ್ನು ವ್ಯಂಗ್ಯವಾಗಿ ಚಿತ್ರಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. 

ಆ ಬಳಿಕ ಕಮಿಷನರ್ ರಾಮದಾಸ್ ಜೆಸಿಬಿಯಿಂದ ಸಂದೀಪ್ ಮನೆ ಕೆಡವಲು ಬಂದಿದ್ದಾರೆ‌. ಆಗ ಸಂದೀಪ್ ಹಾಗೂ ಅವರ ಹೆತ್ತವರು ಅಡುಗೆ ಅನಿಲದ ಸಿಲಿಂಡರ್ ಆನ್ ಮಾಡಿಟ್ಟು, ಬೆಂಕಿಪೊಟ್ಟಣ ಹಿಡಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ. ಸದ್ಯ ಸಂದೀಪ್ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ