-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೊಟ್ಟ ಹಣ ವಾಪಸ್ ಕೊಡದ ಮಹಿಳೆಯ ಮನೆಯ ಮುಂಭಾಗವೇ ವ್ಯಕ್ತಿ ಆತ್ಮಹತ್ಯೆ

ಕೊಟ್ಟ ಹಣ ವಾಪಸ್ ಕೊಡದ ಮಹಿಳೆಯ ಮನೆಯ ಮುಂಭಾಗವೇ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ನೀಡಿರುವ ಹಣ ವಾಪಸ್ ನೀಡದೆ ಸತಾಯಿಸುತ್ತಿದ್ದ ಮಹಿಳೆಯ ಮನೆಯ ಮುಂಭಾಗವೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. 

ಹೊಸಮನೆ ಬಡಾವಣೆಯ ಮಂಜುನಾಥ (45) ಮೃತ ದುರ್ದೈವಿ.

ಮಂಜುನಾಥ ಮಹಿಳೆಯೊಬ್ಬರಿಗೆ 25 ಲಕ್ಷ ರೂ. ಸಾಲ ನೀಡಿದ್ದರು. ಆದರೆ ಕೊಟ್ಟ ಹಣವನ್ನು ಹಿಂದಿರುಗಿಸದೆ ಮಹಿಳೆ ಸತಾಯಿಸಿದ್ದರು. ಅಲ್ಲದೆ ಹಣ ಕೇಳಿದ್ದಕ್ಕೆ ಮಂಜುನಾಥರ ಮೇಲೆ ಮಹಿಳೆ ಹಾಗೂ ಆಕೆಯ ಪುತ್ರ ಹಲ್ಲೆ ಕೂಡ ಮಾಡಿದ್ದರು. 

ಪರಿಣಾಮ ಮನನೊಂದ ಮಂಜುನಾಥ ಸೋಮವಾರ ಬೆಳಗ್ಗೆ ಹೊಸಮನೆ ಬಡಾವಣೆಯ ಮಹಿಳೆ ಮನೆಯ ಮುಂಭಾಗವೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ