-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತ್ನಿಯನ್ನು ಹತ್ಯೆ ಮಾಡಿ ತಾನೂ ನೇಣಿಗೆ ಶರಣಾದ ಪತಿ!

ಪತ್ನಿಯನ್ನು ಹತ್ಯೆ ಮಾಡಿ ತಾನೂ ನೇಣಿಗೆ ಶರಣಾದ ಪತಿ!

ಧಾರವಾಡ: ಪತ್ನಿಯನ್ನು ಹತ್ಯೆಗೈದ ಪತಿಯೋರ್ವನು ಕೊನೆಗೆ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.

ದಾರವಾಢದ ಗಣೇಶ ನಗರದಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ತಿಳಿಯುತ್ತಿದ್ದಂತೆ ಧಾರವಾಡದ ಜನತೆ ಬೆಚ್ಚಿ ಬಿದ್ದಿದ್ದಾರೆ. ಗಣೇಶ ನಗರದ ಗೌಳಿ ಜನಾಂಗದ ಮನಿಷಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲು ಪತ್ನಿ ಮನಿಷಾಳನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಕೌಟುಂಬಿಕ ಕಲಹವೇ ಈ ದುರ್ಘಟನೆಗೆ ಕಾರಣ ಇರಬಹುದು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ